HEALTH TIPS

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬಿ. ಅಶೋಕ್ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ ತಡೆ

ತಿರುವನಂತಪುರಂ: ಐಎಎಸ್ ಅಧಿಕಾರಿ ಬಿ. ಅಶೋಕ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಇಲಾಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತ ನ್ಯಾಯಮಂಡಳಿ ತಡೆ ನೀಡಿದೆ.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಬ್ಬಂದಿ ಮತ್ತು ಆಡಳಿತ ಇಲಾಖೆಗೆ ಅಶೋಕ್ ಅವರನ್ನು ಮೊನ್ನೆ ವರ್ಗಾಯಿಸಲಾಯಿತು. ವರ್ಗಾವಣೆಯ ವಿರುದ್ಧ ಬಿ. ಅಶೋಕ್ ಆಡಳಿತ ನ್ಯಾಯಮಂಡಳಿಯನ್ನು ಸಂಪರ್ಕಿಸಿದ್ದರು.

ಇದಕ್ಕೂ ಮೊದಲು, ಅಶೋಕ್ ಅವರನ್ನು ಕೇರಳ ಸಾರಿಗೆ ಅಭಿವೃದ್ಧಿ ಹಣಕಾಸು ನಿಗಮದ ಅಧ್ಯಕ್ಷರನ್ನಾಗಿ ವರ್ಗಾಯಿಸಿದ ಸರ್ಕಾರದ ಕ್ರಮಕ್ಕೆ ಕೇಂದ್ರ ಆಡಳಿತ ನ್ಯಾಯಮಂಡಳಿ ತಡೆ ನೀಡಿತ್ತು. ಈ ಆದೇಶ ಜಾರಿಯಲ್ಲಿರುವಾಗಲೇ ಮತ್ತೆ ವರ್ಗಾವಣೆ ಮಾಡಲಾಯಿತು. ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಈ ಬದಲಾವಣೆ ಮತ್ತೆ ಮಾಡಲಾಗಿದೆ. ಕೇರಾ ಯೋಜನೆಯ ಸೋರಿಕೆ ಹಗರಣದ ನಂತರ ಬಿ. ಅಶೋಕ್ ಅವರನ್ನು ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವರ್ಗಾಯಿಸರ್ಗಿತ್ತು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries