HEALTH TIPS

ಹಿಮಾಚಲದಲ್ಲಿ ಪ್ರವಾಹ, ಭೂಕುಸಿತ: ಮೂರು ಮಂದಿ ಸಾವು, ಹೂತುಹೋದ ವಾಹನಗಳು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾತ್ರಿ ಇಡೀ ಸುರಿದ ಭಾರಿ ಮಳೆಗೆ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಮಂಡಿಯಲ್ಲಿ ಬಸ್ಸು ನಿಲ್ದಾಣವೊಂದು ಮುಳುಗಡೆಗೊಂಡಿದೆ.

ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ.

ಅವಶೇಷಗಳಡಿಯಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ್ ದೇವಗನ್ ಹೇಳಿದ್ದಾರೆ.

ನಿರಂತರ ಮಳೆಯಿಂದಾಗಿ ಮಂಡಿಯ ಸೋನ್ ಹಾಗೂ ಭದ್ರಾ ಕಾಲುವೆಯಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಬಸ್ಸು ನಿಲ್ದಾಣಕ್ಕೆ ನೀರು ನುಗ್ಗಿ, ಕಾರ್ಯಾಗಾರ, ಪಂಪ್ ಹೌಸ್, ಅಂಗಡಿಗಳಿಗೆ ಹಾಗೂ 20ಕ್ಕೂ ಅಧಿಕ ಬಸ್‌ಗಳಿಗೆ ಹಾನಿಯುಂಟಾಗಿದೆ.

'ಧರ್ಮಪುರಿ ಬಸ್‌ ನಿಲ್ದಾಣದಲ್ಲಿ ಎರಡು ಡಜನ್‌ಗೂ ಅಧಿಕ ಎಚ್‌ಆರ್‌ಟಿಸಿ ಬಸ್, ಅಂಗಡಿಗಳು, ಪಂಪ್ ಹೌಸ್ ಹಾಗೂ ಕಾರ್ಯಾಗಾರಕ್ಕೆ ಹಾನಿ ಉಂಟಾಗಿದೆ' ಎಂದು ಉಪ ಮುಖ್ಯಮಂತ್ರೊ ಮುಕೇಶ್ ಅಗ್ನಿಹೋತ್ರಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಜಧಾನಿ ಶಿಮ್ಲಾದಲ್ಲಿರುವ ಹಿಮ್‌ಲ್ಯಾಂಡ್ ಹೋಟೆಲ್ ಸಮೀಪ ಸಂಭವಿಸಿದ ಭೂಕುಸಿತದಿಂದಾಗಿ ಹಲವು ವಾಹನಗಳು ಹೂತು ಹೋಗಿವೆ. ಹಲವು ರಸ್ತೆಗಳು ಬಂದ್‌ ಆಗಿ ಶಾಲೆ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಯಿತು.

'ತಡರಾತ್ರಿ ಒಂದು ಗಂಟೆ ಸುಮಾರಿಗೆ ಭಾರಿ ಪ್ರಮಾಣದ ಮಳೆಯಯಾಯಿತು. ಮರಗಳು ಹಾಗೂ ಕಟ್ಟಡಗಳು ಬೀಳುವ ಕಿವಿಗಡಚ್ಚುವ ಶಬ್ದಗಳು ಕೇಳಿಸಿದವು. ಕೂಡಲೇ ನಾವು ನಮ್ಮ ವಾಹನಗಳೊಂದಿಗೆ ಅಲ್ಲಿಂದ ಬಂದೆವು' ಎಂದು ಭೂಕುಸಿತ ಉಂಟಾಗುವ ವೇಳೆಯಲ್ಲಿ ಹೋಟೆಲ್‌ ಸಮೀಪ ಕಾರ್‌ ನಿಲ್ಲಿಸಿದ್ದ ಗೌತಮ್ ಹಾಗೂ ರಾಹುಲ್ ಶುಕ್ಲಾ ತಮ್ಮ ಅನುಭವ ಹಂಚಿಕೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries