HEALTH TIPS

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನವೀಕರಣಗೊಂಡ ಭೋಜನ ಶಾಲೆ

ಬದಿಯಡ್ಕ: ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮುನ್ನಡೆಯುತ್ತಿರುವ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸುಸಜ್ಜಿತ ವ್ಯವಸ್ಥೆಗಳೊಂದಿಗೆ ನವೀಕರಣಗೊಂಡ `ಅನ್ನಮಯೀ' ಮಕ್ಕಳ ಭೋಜನ ಶಾಲೆಯಲ್ಲಿ ಗುರುವಾರ ಸಂಜೆ ಹಾಗೂ ಶುಕ್ರವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರಗಿತು.

ಮುಂಬರುವ ಶುಭ ಮುಹೂರ್ತದಲ್ಲಿ ಕಟ್ಟಡದ ಲೋಕಾರ್ಪಣಾ ಸಮಾರಂಭ ಜರಗಲಿರುವುದರ ಪೂರ್ವಭಾವಿಯಾಗಿ ನಡೆದ ಕಾರ್ಯಕ್ರಮಗಳಲ್ಲಿ ಶ್ರೀಮಠದ ಶಾಸನ ತಂತ್ರದ ಪದಾಧಿಕಾರಿಗಳಾದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜೆ.ಎಲ್., ಸುಶಾಸನಾ ಖಂಡದ ಶ್ರೀ ಸಂಯೋಜಕ ಪ್ರವೀಣ ಭೀಮನಕೋಣೆ, ಶಾಲಾ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಅಧ್ಯಾಪಕ ವೃಂದದವರು, ಶಾಲಾ ಹಿತೈಶಿಗಳು ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries