HEALTH TIPS

ನ್ಯಾಯಾಲಯಕ್ಕೆ ಶರಣಾದ ಪಶ್ಚಿಮ ಬಂಗಾಳದ ಸಚಿವ ಚಂದ್ರನಾಥ ಸಿನ್ಹಾ: ಜಾಮೀನು

ಕೋಲ್ಕತ್ತ (PTI): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಚಂದ್ರನಾಥ ಸಿನ್ಹಾ ಅವರು ಇಲ್ಲಿನ ಜಾರಿ ನಿರ್ದೇಶನಾಲಯದ (ಇ.ಡಿ ) ಪ್ರಕರಣಗಳ ನ್ಯಾಯಾಲಯಕ್ಕೆ ಶನಿವಾರ ಶರಣಾದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಜವಳಿ ಖಾತೆಯ ಸಚಿವರಾಗಿರುವ ಸಿನ್ಹಾ ಅವರು ನ್ಯಾಯಾಲಯದ ಆದೇಶದಂತೆ ಶರಣಾದರು. ಇ.ಡಿ ಕಸ್ಟಡಿಗೆ ಕೋರಿತು. ಆದರೆ ನ್ಯಾಯಾಲಯವು ಷರತ್ತು ವಿಧಿಸಿ, ₹ 10 ಸಾವಿರ ಮೊತ್ತದ ವೈಯಕ್ತಿಕ ಬಾಂಡ್‌ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಮೀನು ಮಂಜೂರಾಗಿದ್ದರೂ ಸಿನ್ಹಾ ಅವರು ತಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಕೋಲ್ಕತ್ತದ ಹೊರ ಹೋಗುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.

'ತನಿಖೆಗೆ ಸಹಕಾರ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಗಿಯುವ ತನಕವೂ ಷರತ್ತುಗಳನ್ನು ಪಾಲಿಸಬೇಕು' ಎಂದು ಆದೇಶಿಸಿದೆ.

ಹಣ ದುರುಪಯೋಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನ್ಹಾ ಕೆಲವು ಸಮಯದಿಂದ ಇ.ಡಿ.ಯ ಕಣ್ಗಾವಲಿನಲ್ಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries