HEALTH TIPS

ವಿದೇಶಿ ದೇಣಿಗೆ ಕಾಯ್ದೆ ಉಲ್ಲಂಘನೆ ಶಂಕೆ: ವಾಂಗ್ಚುಕ್‌ ವಿರುದ್ಧ ಸಿಬಿಐ ತನಿಖೆ

ಲೇಹ್: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ ಸ್ಥಾಪಿಸಿರುವ 'ಎಚ್‌ಐಎಲ್‌' ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು (ಎಫ್‌ಸಿಆರ್‌ಎ) ಉಲ್ಲಂಘಿಸಿದೆಯೇ ಎನ್ನುವುದರ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.

'ಎಚ್‌ಐಎಲ್‌' ಸಂಸ್ಥೆಯ ಹಣಕಾಸು ವಿಚಾರದಲ್ಲಿ ಎರಡು ತಿಂಗಳ ಹಿಂದೆಯೇ ತನಿಖೆ ಆರಂಭವಾಗಿದೆ.

ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ' ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ವಾಂಗ್ಚುಕ್ ಪಾಕಿಸ್ತಾನಕ್ಕೆ ಭೇಟಿ ನೀಡಿರುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್‌ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಬುಧವಾರ ಲೇಹ್‌ ಅಪೆಕ್ಸ್‌ ಬಾಡಿ (ಎಲ್‌ಎಬಿ) ಬಂದ್‌ಗೆ ಕರೆ ನೀಡಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪೊಲೀಸರು 50 ಜನರನ್ನು ಬಂಧಿಸಿದ್ದಾರೆ.

ಈ ಬೆಳವಣಿಗೆ ನಡುವೆಯೇ, ವಾಂಗ್ಚುಕ್ ಎರಡು ವಾರ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries