ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರೆ ಇಂದು (ಬುಧವಾರ) ಪುನರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರಕವಾದ ಹವಾಮಾನ ಪರಿಸ್ಥಿತಿ ಇರುವುದರಿಂದ ಬೆಳಿಗ್ಗೆ 6 ಗಂಟೆಗೆ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು ಮಾತಾ ವೈಷ್ಣೋದೇವಿ ದೇಗುಲ ಮಂಡಳಿ (SMVDSB) ಹೇಳಿದೆ.
ಆಗಸ್ಟ್ 26 ರಂದು ಸಂಭವಿಸಿದ ಭೂಕುಸಿತದಲ್ಲಿ 34 ಜನ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದರು. ಬಳಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.




