HEALTH TIPS

ಮಹಾರಾಷ್ಟ್ರ ರಾಜ್ಯಪಾಲ ಸ್ಥಾನಕ್ಕೆ ಸಿ.ಪಿ.ರಾಧಾಕೃಷ್ಣನ್‌ ರಾಜೀನಾಮೆ

ನವದೆಹಲಿ: ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್‌ ಅವರು, ಇಂದು (ಗುರುವಾರ) ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಗೆಲುವು ಸಾಧಿಸಿದರು.

ಅವರು, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಚುನಾಯಿತರಾದರು.

ಗುಜರಾತಿನ ರಾಜ್ಯಪಾಲ ಆಚಾರ್ಯ ದೇವವ್ರತ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಹೊಣೆಯನ್ನು ವಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries