HEALTH TIPS

ಮುಗು ಶ್ರೀಕ್ಷೇತ್ರದಲ್ಲಿ ಶ್ರಮದಾನ

ಕುಂಬಳೆ: ಅತೀ ಪುರಾತನವಾದ ಹಾಗೂ ಪ್ರಕೃತಿ ರಮಣೀಯ ಕಾರಣಿಕ ಕ್ಷೇತ್ರವಾದ ಪುತ್ತಿಗೆ ಸಮೀಪದ ಮುಗು ಶ್ರೀ ಸುಬ್ರಾಯ ದೇವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು, ಇದರ ಅಂಗವಾಗಿ ಭಕ್ತರಿಂದ ತ್ವರಿತಗತಿಯಲ್ಲಿ ಶ್ರಮದಾನ ನಡೆಯುತ್ತಿದೆ. ಕ್ಷೇತ್ರದ ಆಡಳಿತ ಸಮಿತಿ ಹಾಗೂ ಶ್ರೀದುರ್ಗಾ ಯುವಕ ಸಂಘದ ಸದಸ್ಯರು, ಅನಂತಪುರದ ಭಕ್ತರು ಬುಧವಾರ ರಾತ್ರಿ ಶ್ರಮದಾನಕ್ಕೆ ನೇತೃತ್ವ ನೀಡಿ ರಾತ್ರಿ ಶ್ರಮದಾನದಲ್ಲಿ ಭಾಗವಹಿಸಿ ಕೃತಾರ್ಥರಾದರು. 


ಜೂ.18 ರಂದು ಕ್ಷೇತ್ರದಲ್ಲಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾಕಲಶ ನಡೆಸಿ  ಶ್ರೀ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಇದೀಗ ನೂತನ ಗರ್ಭಗುಡಿಯ ನಿರ್ಮಾಣ ಕಾರ್ಯದಂಗವಾಗಿ  ಅ.24 ಕ್ಕೆ ಶಿಲಾನ್ಯಾಸ ನಡೆಯಲಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries