HEALTH TIPS

ಮಣಿಪುರ | ಉನ್ನತಾಧಿಕಾರಿಗಳ ಜತೆ ರಾಜ್ಯಪಾಲ ಸಭೆ: ಪ್ರಧಾನಿ ಮೋದಿ ಭೇಟಿ ಸಾಧ್ಯತೆ

 ಇಂಫಾಲ್‌: ಮಣಿಪುರ ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ ಅವರು ಉನ್ನತ ಅಧಿಕಾರಿಗಳು, ಮಾಜಿ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌ ಸೇರಿದಂತೆ ಹಲವು ಬಿಜೆಪಿ ಶಾಸಕರ ಜೊತೆ ರಾಜಭವನದಲ್ಲಿ ಭಾನುವಾರ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದರು.


ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಎರಡನೇ ವಾರದಲ್ಲಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯ ಕಾರಣ ಈ ಸಭೆಯು ಮಹತ್ವ ಪಡೆದಿದೆ.

ಮುಖ್ಯ ಕಾರ್ಯದರ್ಶಿ ಪುನೀತ್‌ ಕುಮಾರ್ ಗೋಯೆಲ್‌, ಭದ್ರತಾ ಸಲಹೆಗಾರ ಕುಲದೀಪ್‌ ಸಿಂಗ್‌ ಮತ್ತು ಪೊಲೀಸ್‌ ಮಹಾನಿರ್ದೇಶಕ ರಾಜೀವ್‌ ಸಿಂಗ್‌ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ತಿಳಿಸಿದರು.

ಪ್ರಧಾನಿ ಮೋದಿ ಅವರು ಸೆಪ್ಟೆಂಬರ್‌ 13ರಂದು ಮಿಜೋರಾಂಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

ಮಣಿಪುರದಲ್ಲಿ 2023ರ ಮೇ ತಿಂಗಳಿನಿಂದ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಪರಿಣಾಮವಾಗಿ 260ಕ್ಕೂ ಹೆಚ್ಚು ಮಂದಿ ಹತ್ಯೆಗೀಡಾಗಿದ್ದಾರೆ ಮತ್ತು ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries