HEALTH TIPS

ನಾಮಜಪ ಮೆರವಣಿಗೆ ಆಯೋಜಕರ ವಿರುದ್ಧ ಪೊಂಕುನ್ನಂ ಪೋಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದ ನ್ಯಾಯಾಲಯ

ಕೊಟ್ಟಾಯಂ: ಶಬರಿಮಲೆಗೆ ಯುವತಿಯರ ಪ್ರವೇಶವನ್ನು ವಿರೋಧಿಸಿ ಆಯೋಜಿಸಲಾಗಿದ್ದ ನಾಮಜಪ ಮೆರವಣಿಗೆಯ ವಿರುದ್ಧ ಪೋಲೀಸರು ದಾಖಲಿಸಿದ್ದ ಪ್ರಕರಣವನ್ನು ಕಾಂಜಿರಪ್ಪಲ್ಲಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರದ್ದುಗೊಳಿಸಿದೆ.

ನಾಮಜಪ ಮೆರವಣಿಗೆಯಲ್ಲಿ ಭಾಗವಹಿಸಿದ್ದ 25 ಜನರನ್ನು ಖುಲಾಸೆಗೊಳಿಸಲಾಗಿದೆ.

2019 ರಲ್ಲಿ, ಸಂಚಾರಕ್ಕೆ ಅಡ್ಡಿಪಡಿಸುವುದು ಮತ್ತು ಪೋಲೀಸರ ಮೇಲೆ ಹಲ್ಲೆ ಮಾಡುವಂತಹ ಗಂಭೀರ ಆರೋಪಗಳ ಮೇಲೆ ಪೊಂಕುನ್ನಂ ಪೋಲೀಸರು ಶಬರಿಮಲೆ ಕರ್ಮ ಸಮಿತಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದರು. 31 ಜನರನ್ನು ಆರೋಪಿಗಳೆಂದು ಹೆಸರಿಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಆದರೆ, ಪ್ರಕರಣದಲ್ಲಿ ಯಾವುದೇ ಪುರಾವೆಗಳು ಸಿಗದ ಕಾರಣ ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries