HEALTH TIPS

ಶ್ರೀಲಂಕಾ | ಕೇಬಲ್‌ ಕಾರು ಪಲ್ಟಿ: ಭಾರತೀಯ ಸೇರಿ ಏಳು ಬೌದ್ಧ ಸನ್ಯಾಸಿಗಳ ಸಾವು

ಕೊಲಂಬೊ: ಕೇಬಲ್ ಚಾಲಿತ ಕಾರು ಪಲ್ಟಿಯಾಗಿ ಭಾರತೀಯ ಸೇರಿ ಏಳು ಮಂದಿ ಬೌದ್ಧ ಸನ್ಯಾಸಿಗಳು ಮೃತಪಟ್ಟ ಘಟನೆ ವಾಯವ್ಯ ಶ್ರೀಲಂಕಾದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಕೊಲಂಬೊದಿಂದ ಸುಮಾರು 125 ಕಿ.ಮೀ ದೂರದಲ್ಲಿರುವ ನಿಕಾವೆರಟಿಯಾದಲ್ಲಿರುವ ಪ್ರಸಿದ್ಧ ಬೌದ್ಧ ಮಠವಾದ 'ನಾ ಉಯನ ಅರಣ್ಯ ಸೇನಾಸನಯ'ದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದೆ.

ಈ ಮಠವು ಧ್ಯಾನ ಕೇಂದ್ರಗಳಿಗೆ ಹೆಸರುವಾಸಿಯಾಗಿದ್ದು, ಪ್ರಪಂಚದಾದ್ಯಂತ ವಿವಿಧ ಪ್ರದೇಶಗಳ ಸಾಧಕರು ಇಲ್ಲಿಗೆ ಭೇಟಿ ನೀಡುತ್ತಾರೆ.

ಆರಂಭಿಕ ವರದಿಗಳ ಪ್ರಕಾರ ಕೇಬಲ್ ತುಂಡಾಗಿ, ಅತಿ ವೇಗದಲ್ಲಿ ಕೆಳಮುಖವಾಗಿ ಚಲಿಸುತ್ತಿದ್ದ ಕಾರು ಬೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಭಾರತ, ರಷ್ಯಾ ಮತ್ತು ರೊಮೇನಿಯಾದ ತಲಾ ಒಬ್ಬರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries