ಮಂಜೇಶ್ವರ: ಕೊಲ್ಲಂಗಾನ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಜರಗುವ ನವರಾತ್ರಿ ಮಹೋತ್ಸವದ ಪ್ರಯುಕ್ತ ಮೂಡಂಬೈಲಿನ ವಾಗ್ದೇವಿ ಯಕ್ಷಗಾನ ಕಲಾಸಂಘದವರಿಂದ ಸೆ. 23 ರಂದು ಸಂಜೆ 6 ರಿಂದ ಶಲ್ಯ ಸಾರಥ್ಯ ಎಂಬ ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳೀಮಾಧವ ಮಧೂರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

