HEALTH TIPS

ವಿಶ್ವ ರಾಮಕ್ಷತ್ರಿಯ ಮಹಾಸಂಘ ಮಹಾಸಭೆಯಲ್ಲಿ ಸನ್ಮಾನ

ಕಾಸರಗೋಡು: ವಿಶ್ವ ರಾಮಕ್ಷತ್ರಿಯ ಮಹಾಸಂಘದ ವತಿಯಿಂದ ಕಾಸರಗೋಡು ಕನ್ನಡ ಭವನದ ಸ್ಥಾಪಕ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಗಳನ್ನು ಸನ್ಮಾನಿಸಲಾಯಿತು.  ಕುಂದಾಪುರದ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಸದಸ್ಯರ ದ್ವೈವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಡಾ. ವಾಮನ ರಾವ್ ಬೇಕಲ್ ಅವರ ಕನ್ನಡ ಪರ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಉಚಿತ ಸಾರ್ವಜನಿಕ ವಾಚನಾಲಯ ಸೇವೆ, ಕನ್ನಡ ಭವನ ಪ್ರಕಾಶನ ಮೂಲಕ ರಾಮಕ್ಷತ್ರಿಯ ಸಮಾಜದ 9ಮಂದಿಯ ಪುಸ್ತಕ ರಚಿಸಿ, ಬಿಡುಗಡೆ ಇತ್ಯಾದಿ ಜನಪರ ಕಾಳಜಿಯನ್ನು ಗಮನಿಸಿ ಸಮಾಜದ ಪರವಾಗಿ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. 

ವಿಶ್ವ ರಾಮಕ್ಷತ್ರಿಯ ಮಹಾಸಂಘ ಅಧ್ಯಕ್ಷ ಎಚ್ ಆರ್ ಶಶಿಧರ್ ನಾಯ್ಕ್, ಕಾರ್ಯಾಧ್ಯಕ್ಷ ನಾಗರಾಜ್ ಕಲ್ಪತರು, ಪ್ರದಾನ ಕಾರ್ಯದರ್ಶಿ ಶ್ರೀಧರ್ ಪಿ. ಎಸ್. ಕೋಶಾಧಿಕಾರಿ ಶಂಕರ್ ಕುಂದಾಪುರ, ಬಿ. ಎಂ ನಾಥ್, ರೇಖಾ ಸುದೇಶ್ ರಾವ್. ಮಂಜುನಾಥ್, ಗಣಪತಿ ಹೋಬಳಿದಾರ್, ಸತೀಶ್ ದೊಡ್ಡ ನಾಯ್ಕ್, ಲಕ್ಷ್ಮೀಶ್ ಹವಾಲ್ದಾರ್, ಶ್ರೀನಿವಾಸ್ ಹೆಬ್ರಿ ಮೊದಲಾದವರು ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries