ಸಮರಸ ಚಿತ್ರಸುದ್ದಿ: ಪೆರ್ಲ: ಇಡಿಯಡ್ಕ ದುರ್ಗಾಪರಮೇಶ್ವೀ (ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೋಮವಾರ ಆರಂಭಗೊಂಡ ನವರಾತ್ರಿ ಉತ್ಸವ ಹಾಗೂ ಭಜನ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣರಾಜ ಪುಣ್ಚಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ದೇವಸ್ಥಾನ ಆಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.





