HEALTH TIPS

ವಿದೇಶಿ ಪ್ರವಾಸಕ್ಕಲ್ಲ, ಪ್ರವಾಹ ಪೀಡಿತ ಸ್ಥಳಕ್ಕೆ ತೆರಳಿ:ರಾಹುಲ್‌ಗೆ ಬಿಜೆಪಿ ಸಲಹೆ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿ ಎಂದು ಬಿಜೆಪಿ ಸಲಹೆ ನೀಡಿದೆ. 

ರಾಹುಲ್‌ ಗಾಂಧಿ ಅವರು ಮಲೇಷ್ಯಾ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಅವರ ಕಾಲೆಳಿದಿದೆ.

'ರಜೆಯಲ್ಲಿ ವಿದೇಶಿ ಪ್ರವಾಸಕ್ಕೆ ತೆರಳುತ್ತಿರುವ ರಾಹುಲ್‌ ಗಾಂಧಿ ಅವರಿಗೆ ಶುಭಾಶಯಗಳು. ಕೆಲವೊಮ್ಮೆ ಸಾಮಾನ್ಯ ರಾಜಕಾರಣಿಯಾಗಿ‌ದ್ದರೆ, ನಾನು ತುಂಬಾ ಕೆಲಸ ಮಾಡಿದ್ದೇನೆ ಎಂದು ರಜೆ ತೆಗೆದುಕೊಳ್ಳುತ್ತೇನೆ ಎನ್ನುತ್ತಾರೆ. ಆದರೆ, ಸಾರ್ವಜನಿಕ ಜೀವನದಲ್ಲಿ ಯಾವುದೇ ವಿರಾಮಗಳು ಇರುವುದಿಲ್ಲ ಎಂದು ರಾಹುಲ್‌ ಅವರಿಗೆ ನೆನಪಿಸುತ್ತೇನೆ' ಎಂದು ಬಿಜೆಪಿ ನಾಯಕ ರವಿ ಶಂಕರ್‌ ಪ್ರಸಾದ್‌ ಅವರು ಹೇಳಿದ್ದಾರೆ.

ಜನ ನಾಯಕನಾದವರು ಜನರ ಕಷ್ಟಗಳಿಗೆ ಸದಾ ಸ್ಪಂದಿಸಬೇಕಾಗುತ್ತದೆ. ಪಂಜಾಬ್‌ ಹಾಗೂ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿ ಸಂಕಷ್ಟದಲ್ಲಿರುವ ಜನರನ್ನು ರಾಹುಲ್‌ ಭೇಟಿಯಾಗಿದ್ದರೆ ಒಳ್ಳೆಯದಿತ್ತು ಎಂದಿದ್ದಾರೆ.

'ಬಿಹಾರ ರಾಜಕಾರಣದ ಬಿಸಿ ತಾಳಲಾರದೆ ಕಾಂಗ್ರೆಸ್‌ನ ಯುವರಾಜರು ವಿದೇಶಿ ಪ್ರವಾಸ ಮಾಡುತ್ತಿದ್ದಾರೆಯೇ ಅಥವಾ ಯಾರಿಗೂ ತಿಳಿಯದ ರಹಸ್ಯ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆಯೇ' ಎಂದು ಅಮಿತ್‌ ಮಾಳವೀಯ ಪ್ರಶ್ನಿಸಿದ್ದಾರೆ.

ಜನರು ಪ್ರವಾಹದಿಂದ ಸಂಕಷ್ಟದಲ್ಲಿರುವಾಗ ರಾಹುಲ್‌ ಗಾಂಧಿ ಅವರು ರಜೆಗಾಗಿ ತೆರಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries