HEALTH TIPS

ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ; ಹಲವರ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. 

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ.

ಮಂಗಳವಾರ ಮುಂಜಾನೆ ಸೇತುವೆಯೊಂದು ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಹ್ರಾಡೂನ್‌ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ. ಇಬ್ಬರಿಂದ ಮೂವರು ಮಂದಿ ಕಾಣೆಯಾಗಿದ್ದಾರೆ. ಇನ್ನೊಬ್ಬರು ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ.

ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದ್ದು, 300ರಿಂದ 400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈನಿತಾಲ್‌ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚಿಸಿದ್ದಾರೆ.

ಡೆಹ್ರಾಡೂನ್‌ಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಜೊತೆಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries