HEALTH TIPS

ವಯನಾಡ್: ಕಾಫಿ ಬೆಳೆಗಾರರ ಸಮಸ್ಯೆ ಆಲಿಸಿದ ಸೋನಿಯಾ, ಪ್ರಿಯಾಂಕಾ

ವಯನಾಡ್: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡ್‌ಗೆ ಭೇಟಿ ನೀಡಿದ್ದು ಕಾಫಿ ಬೆಳೆಗಾರರೊಂದಿಗೆ ಸಂವಾದ ನಡೆಸಿದ್ದಾರೆ.

ಚಂದೇಲ್‌ನ ಕಾಫಿ ಸಂಶೋಧನಾ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಪ್ರಯೋಗಾಲಯದ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.

ಜತೆಗೆ. ಸ್ಥಳೀಯ ಕಾಫಿ ಬೆಳೆಯುವ ರೈತರೊಂದಿಗೆ ಸಂವಹನ ನಡೆಸಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಹವಾಮಾನ ಬದಲಾವಣೆಯ ಸವಾಲುಗಳು, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸೇರಿ ಹಲವು ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಪ್ರಿಯಾಂಕಾ ಗಾಂಧಿ ಪದ್ಮಶ್ರೀ ಪುರಸ್ಕೃತ ರೈತ ಚೆರುವಯಲ್ ರಾಮನ್ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ವಿವಿಧ ತಳಿಯ ಭತ್ತದ ಬಗ್ಗೆ, ಕೃಷಿಯ ಬಗ್ಗೆ ಮಾತುಕತೆ ನಡೆಸಿದ್ದರು. ರಾಮನ್ ಜತೆಗೆ ಗದ್ದೆಗಳಲ್ಲಿ ಓಡಾಡಿ ಸ್ಥಳೀಯ ಸಂಪ್ರದಾಯದ ಬಗ್ಗೆಯೂ ಮಾಹಿತಿ ಪಡೆದಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries