ಬದಿಯಡ್ಕ: ಕೇರಳದ ಕುನ್ನಂಕುಲಂ ಪೋಲೀಸ್ ಠಾಣೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾದ ಯೂತ್ ಕಾಂಗ್ರೆಸ್ ಮಂಡಲ ಅಧ್ಯಕ್ಷ ಸುಜಿತ್ಗೆ ನ್ಯಾಯ ಒದಗಿಸಬೇಕು ಮತ್ತು ಸಂಬಂಧಪಟ್ಟ ಎಸ್ಐ ಸೇರಿದಂತೆ ಪೋಲೀಸ್ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಆದೇಶದಂತೆ ಬದಿಯಡ್ಕ ಪೋಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಡಿಸಿಸಿ ಕಾರ್ಯದರ್ಶಿ ಜೆ.ಎಸ್. ಸೋಮಶೇಖರ ಅವರು ಪ್ರತಿಭಟನಾ ಮೆರವಣಿಗೆ ಉದ್ಘಾಟಿಸಿ ಮಾತನಾಡಿ, ಅಪರಾಧಿಗಳಾದ ಎಸ್ಐ ಸೇರಿದಂತೆ ಪೋಲೀಸರನ್ನು ಸೇವೆಯಿಂದ ವಜಾಗೊಳಿಸಿ ಜೈಲಿಗೆ ಹಾಕುವವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದರು. ಇದೀಗ ಕೇವಲ ಅಮಾನತುಗೊಳಿಸಲಾಗಿದೆ. ಇದು ಅಪರಾಧಿಗಳನ್ನು ರಕ್ಷಿಸಲು ಸರ್ಕಾರದ ತಂತ್ರವಾಗಿದ್ದು, ಮುಂದುವರೆದರೆ ತೀವ್ರ ಪ್ರತಿರೋಧ ಒಡ್ಡಲಾಗುವುದು ಎಂದು ಅವರು ಎಚ್ಚರಿಸಿದರು.
ಡಿಕೆಟಿಎಫ್ ಜಿಲ್ಲಾಧ್ಯಕ್ಷ ಎ. ವಾಸುದೇವನ್ ನಾಯರ್ ಮುಖ್ಯ ಭಾಷಣ ಮಾಡಿದರು. ಅಪರಾಧಿಗಳನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸಿದರೆ ಬಲವಾಗಿ ವಿರೋಸುವುದಾಗಿ ಹೇಳಿದರು.
ಪ್ರತಿಭಟನೆಯಲ್ಲಿ ಕುಂಬಳೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವೀಂದ್ರ ಮಾಸ್ತರ್, ಕಾರಡ್ಕ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ನಾರಾಯಣ ಮಣಿಯಾಣಿ ನೀರ್ಚಾಲ್, ಗಂಗಾಧರ ಗೋಳಿಯಡ್ಕ, ಖಾದರ್ ಮಾನ್ಯ, ಬ್ಲಾಕ್ ಕಾರ್ಯದರ್ಶಿಗಳಾದ ಶಾಫಿ ಗೋಳಿಯಡ್ಕ, ರಾಮ ಪಟ್ಟಾಜೆ, ಹಿರಿಯ ಕಾಂಗ್ರೆಸ್ ಮುಖಂಡರಾದ ಪಿ.ಜಿ. ಚಂದ್ರಹಾಸ ರೈ, ತಿರುಪತಿಕುಮಾರ್ ಭಟ್, ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಬದಿಯಡ್ಕ, ಯೂತ್ ಕಾಂಗ್ರೆಸ್ ಎಣ್ಮಕಜೆ ಮಂಡಲ ಅಧ್ಯಕ್ಷ ಫಾರೂಕ್ ಪಳ್ಳಂ, ಎಣ್ಮಕಜೆ ಮಂಡಲ ಪದಾಧಿಕಾರಿಗಳಾದ ರಜಾಕ್ ಪೆರ್ಲ, ರಜಾಕ್ ನಲ್ಕ, ಶ್ರೀನಿವಾಸ ಶೆಣೈ, ಬ್ಲಾಕ್ ಕಾರ್ಯದರ್ಶಿ ಅಬ್ದುಲ್ಲಾ, ಬದಿಯಡ್ಕ ಮಂಡಲ ಪದಾಧಿಕಾರಿಗಳಾದ ಜಗನ್ನಾಥ ರೈ, ಕೃಷ್ಣ ದಾಸ್, ಗೋಪಾಲ ಡಿ, ಮುಂತಾದವರು ಮಾತನಾಡಿದರು. ಎಣ್ಮಕಜೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಗಾಂಭೀರ್ ಸ್ವಾಗತಿಸಿದರು.

.jpg)
.jpg)
