HEALTH TIPS

ಕುಕಿ - ಕೇಂದ್ರದ ಮಧ್ಯೆ ಒಪ್ಪಂದ ಮಹತ್ವದ ಹೆಜ್ಜೆ: ಮೈತೇಯಿ ಸಂಘಟನೆ

ಇಂಫಾಲ್‌: ಮಣಿಪುರದಲ್ಲಿ ಕುಕಿ-ಜೊ ಗುಂಪುಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಒಪ್ಪಂದ ಏರ್ಪಟ್ಟಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಹೆಜ್ಜೆ ಎಂದು ಮೈತೇಯಿ ಸಂಘಟನೆ ಅರಂಬಾಯ್‌ ತೆಂಗ್‌ಗೋಲ್‌ ಶನಿವಾರ ಅಭಿಪ್ರಾಯಪಟ್ಟಿದೆ.

ಈ ವಿಷಯದಲ್ಲಿ ಕೇಂದ್ರ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಅದು ಹೇಳಿಕೆಯಲ್ಲಿ ತಿಳಿಸಿದೆ.

ಮ್ಯಾನ್ಮಾರ್‌ನಿಂದ ಬರುವ ಅಕ್ರಮ ವಲಸಿಗರು ಮತ್ತು ನಿರಾಶ್ರಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅದು ಆಗ್ರಹಿಸಿದೆ.

ಮಣಿಪುರದಲ್ಲಿ 2023ರಿಂದ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಸುಮಾರು 260 ಮಂದಿ ಮೃತಪಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries