HEALTH TIPS

ತನಿಖಾ ಸಮಿತಿ ಕಾರ್ಯದರ್ಶಿಯಾಗಿ ಗಣೇಶ್ ಭಟ್‌

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ಕುರಿತ ತನಿಖಾ ಸಮಿತಿಯ ಕಾರ್ಯದರ್ಶಿಯಾಗಿ ಕರ್ನಾಟಕದ ನಿವೃತ್ತ ಐಆರ್‌ಎಸ್‌ ಅಧಿಕಾರಿ ಗಣೇಶ್ ಭಟ್‌ ನೇಮಕವಾಗಿದ್ದಾರೆ. 

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಗಣೇಶ್ ಭಟ್‌ ಅವರನ್ನು ಮೂವರು ಸದಸ್ಯರ ತನಿಖಾ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ಕರ್ನಾಟಕದ ಹಿರಿಯ ವಕೀಲ ಬಿ.ವಿ.ಆಚಾರ್ಯ ಈ ಸಮಿತಿಯ ಸದಸ್ಯರಾಗಿದ್ದಾರೆ.

ಗಣಪತಿ ಭಟ್‌ ಅವರು ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಕರ್ನಾಟಕ ಮತ್ತು ಗೋವಾ ಪ್ರಾದೇಶಿಕ ಪ್ರಧಾನ ಮುಖ್ಯ ಆಯುಕ್ತ ಸ್ಥಾನದಿಂದ ನಿವೃತ್ತರಾಗಿದ್ದಾರೆ. ಇದಕ್ಕೂ ಮುನ್ನ ಅವರು ನವದೆಹಲಿಯಲ್ಲಿ ಅಂತರರಾಷ್ಟ್ರೀಯ ತೆರಿಗೆ ವಿಭಾಗದ ಪ್ರಧಾನ ಮುಖ್ಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries