HEALTH TIPS

ಮಣಿಪುರದಲ್ಲಿ ಶಾಂತಿ ಸ್ಥಾಪನೆಯತ್ತ ಹೆಜ್ಜೆ ಒಳ್ಳೆಯ ಸಂಗತಿ: ಆರ್‌ಎಸ್‌ಎಸ್

ಜೋಧಪುರ: ಮಣಿಪುರವು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿರುವುದು ಒಳ್ಳೆಯ ಸಂಗತಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಭಾನುವಾರ ಅಭಿಪ್ರಾಯಪಟ್ಟಿದೆ.

ಜೋಧಪುರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್‌ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಸುನಿಲ್ ಅಂಬೇಕರ್ ಅವರು, 'ಈಶಾನ್ಯ ಭಾರತದಲ್ಲಿ ಪತ್ಯೇಕತಾವಾದಿ ಹೋರಾಟ ಮತ್ತು ಹಿಂಸಾಚಾರ ತಗ್ಗುತ್ತಿರುವುದನ್ನು ಗಮನಿಸಿದ್ದೇವೆ.

ಈಗ ಅಲ್ಲಿ ಶಾಂತಿ ನೆಲಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮಾಡಿದ ಪ್ರಯತ್ನದ ಫಲವಾಗಿ ಈ ಫಲಿತಾಂಶ ಕಾಣುತ್ತಿದ್ದೇವೆ' ಎಂದರು.

ಇತ್ತೀಚೆಗೆ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿತ್ತು. ಈ ಬೆಳವಣಿಗೆ ಮೇಲೆ ಆರ್‌ಎಸ್‌ಎಸ್‌ ನಿಗಾ ಇಟ್ಟಿತ್ತು ಮತ್ತು ಕುಕಿ-ಮೈತೇಯಿ ಸಮುದಾಯಗಳನ್ನು ಒಟ್ಟಿಗೆ ತರಲು ಸತತವಾಗಿ ಪ್ರಯತ್ನಿಸಿತ್ತು. ಸದ್ಯ ಸಮುದಾಯಗಳು ಶಾಂತಿ ಸ್ಥಾಪನೆಯತ್ತ ಹೆಜ್ಜೆ ಇಟ್ಟಿವೆ. ಅದರಲ್ಲೂ ಕೇಂದ್ರ ಗೃಹ ಇಲಾಖೆಯು ಕುಕಿ ಸಮುದಾಯದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರದಲ್ಲಿ ಈ ಬೆಳವಣಿಗೆ ಕಾಣುತ್ತಿದ್ದೇವೆ. ಸದ್ಯ ಮೈತೇಯಿಗಳಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಮುಕ್ತಗೊಳಿಸಲಾಗಿದೆ' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries