ಸಮರಸ ಚಿತ್ರಸುದ್ದಿ: ಮಂಜೇಶ್ವರ: ಪಾವೂರು ಪೆÇಯ್ಯೆ ಶ್ರೀ ಚಾಮುಂಡೇಶ್ವರೀ ಮಂದಿರದಲ್ಲಿ ಜರಗುತ್ತಿರುವ ನವರಾತ್ರಿ ಮಹೋತ್ಸವದ ಪ್ರಯುಕ್ತ ಮೂಡಂಬೈಲಿನ ವಾಗ್ದೇವೀ ಯಕ್ಷಗಾನ ಕಲಾಸಂಘದಿಂದ 'ಶ್ರೀಕೃಷ್ಣ ಕಾರುಣ್ಯ' ಕಥಾಭಾಗದ ತಾಳಮದ್ದಳೆ ಜರಗಿತು. ಪಾತ್ರವರ್ಗದಲ್ಲಿ ನಾಗರಾಜ ಪದಕಣ್ಣಾಯ ಮೂಡಂಬೈಲು, ಚಂದ್ರಕುಮಾರ್ ಬಲಿಪಗುಳಿ, ನಾರಾಯಣ ನಾವಡ ಮೂಡಂಬೈಲು ಹಾಗೂ ಶಾಶ್ವತಿ ನಾವಡ ಮೂಡಂಬೈಲು ಭಾಗವಹಿಸಿದರು.
ಹಿಮ್ಮೇಳದಲ್ಲಿ ಭಾಗವತರಾಗಿ ಶುಭಾನಂದ ಶೆಟ್ಟಿ ಕುಳೂರು, ಚೆಂಡೆಯಲ್ಲಿ ರಾಜಾರಾಮ ಬಲ್ಲಾಳ್ ಚಿಪ್ಪಾರು ಮತ್ತು ಮೃದಂಗದಲ್ಲಿ ಗಣಪತಿ ಭಟ್ ಪೆರ್ಲ ಸಹಕರಿಸಿದರು.




.jpg)
