HEALTH TIPS

IPS ಅಧಿಕಾರಿ ಅಂಜನಾ ವಿರುದ್ಧದ ಟ್ವೀಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ MLC ಮಿಟ್ಕರಿ

 ಮುಂಬೈ: ಐ‍ಪಿಎಸ್‌ ಅಧಿಕಾರಿ ಅಂಜನಾ ಕೃಷ್ಣಾ ವಿರುದ್ಧ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ಎಂಎಲ್‌ಸಿ ಅಮೋಲ್ ಮಿಟ್ಕರಿ ತಮ್ಮ ಹೇಳಿಕೆಯನ್ನು ಹಿಂಪಡೆದು ಇಂದು (ಶನಿವಾರ) ಕ್ಷಮೆಯಾಚಿದ್ದಾರೆ.

ಅಂಜನಾ ಕೃಷ್ಣಾ ಅವರು ಯುಸಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾರಣವಾದ ಶೈಕ್ಷಣಿಕ ಮತ್ತು ಜಾತಿ ಪ್ರಮಾಣಪತ್ರವನ್ನು ಪ್ರಶ್ನಿಸಿ ಟ್ವೀಟ್‌ ಮಾಡಿದ್ದರು.

ಇದೀಗ ಟ್ವೀಟ್‌ ಅನ್ನು ಅಳಿಸಿ ಹಾಕಿ ಕ್ಷಮೆಯಾಚಿದ್ದಾರೆ.


ಸೋಲಾಪುರ ಜಿಲ್ಲೆಯ ಕುರ್ಡು ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಸಂದರ್ಭದಲ್ಲಿ ದಾಳಿ ನಡೆಸಿದ್ದ ಜಿಲ್ಲೆಯ ಡಿಎಸ್‌ಪಿ ಹಾಗೂ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣಾ ಅವರಿಗೆ ಫೋನ್ ಕಾಲ್‌ನಲ್ಲಿ ಡಿಸಿಎಂ ಅಜಿತ್ ಪವಾರ್ ಧಮಕಿ ಹಾಕಿದ್ದಾರೆ ಎನ್ನಲಾಗಿದೆ. ಅದರ ಬೆನ್ನಲ್ಲೇ ಮಿಟ್ಕರಿ ಅಂಜನಾ ವಿರುದ್ಧ ಸುಳ್ಳು ಆರೋಪ ಮಾಡಿದ್ದರು.

ಮಹಿಳಾ ಪೊಲೀಸ್ ಅಧಿಕಾರಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಮತ್ತು ಕಾಂಗ್ರೆಸ್ ನಾಯಕಿ ಯಶೋಮತಿ ಠಾಕೂರ್ ಅವರು ಮಿಟ್ಕರಿ ವಿರುದ್ಧ ಕಿಡಿಕಾರಿದ್ದರು.

'ಇದು ನನ್ನ ಪಕ್ಷದ ನಿಲುವಾಗಿರಲಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪೊಲೀಸ್ ಪಡೆ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಗಳ ಬಗ್ಗೆ ನನಗೆ ಅತ್ಯುನ್ನತ ಗೌರವವಿದೆ. ಪಕ್ಷದ ಹಿರಿಯರ ನಾಯಕತ್ವದ ನಿಲುವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ' ಎಂದು ಮಿಟ್ಕರಿ ತಿಳಿಸಿದ್ದಾರೆ.

ಅಜಿತ್ ಪವಾರ್ ನಡೆ ಖಂಡಿಸಿರುವ ಶಿವಸೇನಾ ಉದ್ಧವ್ ಠಾಕ್ರೆ ಬಣದ ನಾಯಕ ಹಾಗೂ ಸಂಸದ ಸಂಜಯ್ ರಾವುತ್ ಅವರು, ನಮ್ಮ ರಾಜ್ಯದ ಡಿಸಿಎಂ, ಕಳ್ಳರ ರಕ್ಷಣೆಗೆ ನಿಂತಿದ್ದಾರೆ ನೋಡಿ ಎಂದು ಕಿಡಿಕಾರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries