HEALTH TIPS

ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ.

ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿಅವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಪರಾಭವಗೊಂಡರು.

ಫಲಿತಾಂಶಗಳನ್ನು ಪ್ರಕಟಿಸಿದ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ(ನಿವೃತ್ತ) ಸುದರ್ಶನ್ ರೆಡ್ಡಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದರು.

ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಮತ್ತು ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ರಾಧಾಕೃಷ್ಣನ್ ಅವರು ಈಗ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರೂ ಆಗಿರುತ್ತಾರೆ.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು.

ಅಕ್ಟೋಬರ್ 20, 1957 ರಂದು ತಮಿಳುನಾಡಿನ ಕೊಂಗು ಪ್ರದೇಶದ ತಿರುಪ್ಪೂರಿನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು, 17ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಸೇರಿದರು. ನಂತರ ಅವರು ಭಾರತೀಯ ಜನತಾ ಪಕ್ಷ(ಬಿಜೆಪಿ) ಕಾರ್ಯಕರ್ತರಾಗಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ, ಎರಡು ಬಾರಿ ಸಂಸದರಾಗಿ, ಆನಂತರ ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries