HEALTH TIPS

ತ್ರಿಪುರಾ | ಹಿಂಸಾಚಾರಕ್ಕೆ ‌ತಿರುಗಿದ ಬಂದ್‌: 10 ಮಂದಿಗೆ ಗಂಭೀರ ಗಾಯ

ಅಗರ್ತಲ: ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಘಟನೆಯೊಂದು ಬಂದ್‌ಗೆ ಕರೆ ನೀಡಿತ್ತು. ಈ ವೇಳೆ ಬಂದ್‌ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಪ್ರಾಸ ಒಪ್ಪಂದದ ಅನುಷ್ಠಾನ, ಅಕ್ರಮ ವಲಸಿಗರನ್ನು ಪತ್ತೆಹಚ್ಚುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಒತ್ತಾಯಿಸಿ ಇತ್ತೀಚೆಗೆ ರಚನೆಯಾದ 'ತ್ರಿಪುರ ನಾಗರಿಕ ಸಮಾಜ' ಸಂಘಟನೆ 24 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು.

ಆದರೆ ಧಲೈನ ಕಮಲಪುರ ಉಪವಿಭಾಗದಲ್ಲಿರುವ ಶಾಂತಿನಗರ ಮಾರುಕಟ್ಟೆಯಲ್ಲಿ ಸಂಜೆ 6 ಗಂಟೆ ಸುಮಾರಿಗೆ ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂದ್ ಬೆಂಬಲಿಗರು ಅಂಗಡಿಯವರು ಮತ್ತು ಗ್ರಾಮಸ್ಥರ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿ, ಮನಬಂದಂತೆ ಕಲ್ಲು ತೂರಾಟ ನಡೆಸಿದರು. ಈ ವೇಳೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಲೇಮಾ ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ ಎಂದು ತ್ರಿಪುರಾ ಪೊಲೀಸ್ ವಕ್ತಾರ ರಾಜ್‌ದೀಪ್ ದೇಬ್ ಮಾಹಿತಿ ನೀಡಿದ್ದಾರೆ.

ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮಾಣಿಕ್ ಸಹಾ ಹಿಂಸಾಚಾರವನ್ನು ಖಂಡಿಸಿದ್ದು, ವ್ಯಕ್ತಿಗಳ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries