HEALTH TIPS

ತಿರುಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ 10 ಟನ್ ರಕ್ತಚಂದನ ವಶ: ಇಬ್ಬರ ಬಂಧನ

ನವದೆಹಲಿ: ಆಂಧ್ರಪ್ರದೇಶದ ತಿರುಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ 10 ಟನ್ ತೂಕದ ರಕ್ತಚಂದನವನ್ನು ದೆಹಲಿ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಕರಣ ಸಂಬಂಧ ಆಗ್ನೇಯ ಜಿಲ್ಲೆಯ ಎಸ್‌ಟಿಎಫ್ ತಂಡವು ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೆಪ್ಟೆಂಬರ್ 4ರಂದು ಹೊಸಕೋಟೆ ಪೊಲೀಸರು ₹25 ಲಕ್ಷ ಮೌಲ್ಯದ 11 ಕ್ವಿಂಟಲ್‌ ತೂಕದ 102 ತುಂಡು ರಕ್ತಚಂದನ ವಶಪಡಿಸಿಕೊಂಡಿದ್ದರು.

ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಟ್ರಾನ್ಸ್‌ಪೋರ್ಟ್‌ ಕಂಪನಿ ಸರಕು ಸಾಗನೆ ವಾಹನದಲ್ಲಿ ಸಾಗಿಸುವಾಗ ಪೊಲೀಸರು ವಶಪಡಿಸಿಕೊಂಡಿದ್ದರು. ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries