ಮಂಜೇಶ್ವರ: ತುಳುನಾಡ ಬಾಲೆ ಬಂಗಾರ್ ಸಮಿತಿ ತುಳುವೆರೆ ಆಯನೊ ಕೂಟ ಮಂಜೇಶ್ವರ ಇದರ ದಶಮಾನೋತ್ಸವದ ಅಂಗವಾಗಿ ದೇಶಿಯ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ತುಳುನಾಡ ಬಾಲೆ ಬಂಗಾರ್-2025 ಮುದ್ದು ಮಕ್ಕಳ ಪೋಟೋ ಸ್ಪರ್ಧೆ- ಸೀಸನ್ 10 ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ 4 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಬಿಂಬಿಸುವ ರೀತಿಯಲ್ಲಿನ ಪೋಟೋಗಳಿಗೆ ಸ್ಪರ್ಧೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಭಾಗವಹಿಸುವ ಮಕ್ಕಳ ಪೋಷಕರು ತಮ್ಮ ಮಕ್ಕಳ ಭಾವಚಿತ್ರವನ್ನು 6*9 ಸೈಜ್ ನಲ್ಲಿ 1 ಭಾವಚಿತ್ರವನ್ನು ಮಾತ್ರ ಕಳುಹಿಸಬೇಕು. ಭಾವ ಚಿತ್ರದ ಹಿಂದೆ ಮಗುವಿನ ಹೆಸರು, ಹುಟ್ಟಿದ ದಿನ, ತಿಂಗಳು, ಇಸವಿ, ಜನನ ಪ್ರಮಾಣ ಪತ್ರದ ಕರಡು ಪ್ರತಿ, ಪೋಷಕರ ಹೆಸರು, ವಿಳಾಸವನ್ನು ಸ್ಪಷ್ಟವಾಗಿ ಬರೆದಿರಬೇಕು. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ, ಚಿಕ್ಕಮಂಗಳೂರು ಜಿಲ್ಲೆಗಳ ಮಕ್ಕಳು ಮಾತ್ರ ಸ್ಪರ್ಧೆಗೆ ಅರ್ಹರು. ಪೋಟೋಗಳನ್ನು ಕೊರಿಯರ್ ಮೂಲಕ ನವೆಂಬರ್ 5 ರ ಮೊದಲು ತಲುಪುವಂತೆ ಕಳುಹಿಸಬೇಕು. ನವೆಂಬರ್ 13 ರಂದು ಮಂಜೇಶ್ವರದಲ್ಲಿ ನಡೆಯಲಿರುವ ತುಳುನಾಡ ಬಾಲೆ ಬಂಗಾರ್- ದಶಮಾನೋತ್ಸವದ ಕಾರ್ಯಕ್ರಮದಂದು ತೀರ್ಪುಗಾರರು ಹಾಗೂ ಪ್ರಮುಖ ಅತಿಥಿ ಗಣ್ಯರ ಸಮ್ಮುಖದಲ್ಲಿ ತುಳುನಾಡ ಬಾಲೆ ಬಂಗಾರ್ - 2025 ಸ್ಪರ್ಧಾ ವಿಜೇತರ ಘೋಷಣೆ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ, ಪಂಚಮ ಬಹುಮಾನಗಳು ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣಪತ್ರವನ್ನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳ ಪೋಷಕರು, ರತನ್ ಕುಮಾರ್ ಹೊಸಂಗಡಿ. ಅಧ್ಯಕ್ಷರು, ತುಳುನಾಡ ಬಾಲೆ ಬಂಗಾರ್ ಸಮಿತಿ, ತುಳುವೆರೆ ಆಯನೊ ಕೂಟ ಮಂಜೇಶ್ವರ, ಸಿಂಡ್ರೆಲಾ ನರ್ಸರಿ ಬಳಿ, ಹೊಸಬೆಟ್ಟು ಮಂಜೇಶ್ವರ- 671323, ಕಾಸರಗೋಡು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7034338773, 974636850 ಗೆ ಸಂಪರ್ಕಿಸಲು ಕೋರಲಾಗಿದೆ.

