HEALTH TIPS

ಮುಗು ಶ್ರೀ ಸುಬ್ರಾಯ ದೇವ ದೇವಸ್ಥಾನ ಅ.24 ಕ್ಕೆ ಭೂಮಿಪೂಜೆ ಹಾಗೂ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

ಕುಂಬಳೆ: ಅತೀ ಪುರಾತನವಾದ ಹಾಗೂ ಪ್ರಕೃತಿ ರಮಣೀಯ ಕಾರಣಿಕ ಕ್ಷೇತ್ರವಾದ ಮುಗು ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಅ. 24 ರಂದು ಶುಕ್ರವಾರ ಬೆಳಿಗ್ಗೆ 10.30ರ ಶುಭಮುಹೂರ್ತದಲ್ಲಿ ಭೂಮಿಪೂಜೆ ಹಾಗೂ ಬೆಳಿಗ್ಗೆ 11.20ರ ಶುಭಲಗ್ನ ಸುಮುಹೂರ್ತದಲ್ಲಿ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಸುಬ್ರಾಯ ದೇವರ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಜರಗಲಿದೆ.  


ಬೆಳಿಗ್ಗೆ 8-30ಕ್ಕೆ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, 9ಕ್ಕೆ ಜರಗುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀಧಾಮ ಮಾಣಿಲ, ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಶ್ರೀ ಕ್ಷೇತ್ರ ಕೊಂಡೆವೂರು ಆಶೀರ್ವಚನಗೈಯಲಿದ್ದಾರೆ. ಬಾಡೂರು ಯಜಮಾನ್  ಕುಂಞಣ್ಣ ಭಂಡಾರಿ ಕೋಳಾರು ಅಧ್ಯಕ್ಷತೆವಹಿಸುವರು. ಕ್ಷೇತ್ರದ ತಂತ್ರಿವರ್ಯ ದೇಲಂಪಾಡಿ ಬ್ರಹ್ಮಶ್ರೀ ಗಣೇಶ ತಂತ್ರಿ ದಿವ್ಯ ಉಪಸ್ಥಿತರಿರುವರು. sÁರ್ಮಿಕ ಮುಂದಾಳು,ಅನಿವಾಸಿ  ಉದ್ಯಮಿ ಇ. ಎಸ್. ಮಹಾಬಲೇಶ್ವರ ಭಟ್ ಎಡಕ್ಕಾನ, ಶಿವಶಂಕರ ನೆಕ್ರಾಜೆ, ವಸಂತ ಪೈ ಬದಿಯಡ್ಕ, ಉದ್ಯಮಿ ಗಿರಿಧರ ಶೆಟ್ಟಿ ಮಂಗಳೂರು, ಕನಿಲ ಶ್ರೀ ಭಗವತಿ ಕ್ಷೇತ್ರ ಅಧ್ಯಕ್ಷ ಪದ್ಮನಾಭ ಕಡಪ್ಪರ, ಉದಯಶಂಕರ ಭಟ್ ಕರೋಡಿ ಮುಖ್ಯ ಅತಿಥಿಗಳಾಗಿರುವರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಟ್ರಮಣ ಭಟ್, ಅಮೆತ್ತೋಡು ಕ್ಷೇತ್ರ ಪವಿತ್ರಪಾಣಿ ಸುರೇಶ್ಚಂದ್ರ ರಾವ್, ಹೊಸಂಗಡಿ ಆದಿಕ್ಷೇತ್ರ ಶ್ರೀ ರಕ್ಷೇಶ್ವರಿ ದೇವಸ್ಥಾನ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆಚಾರ್ಯ ಬಾಡೂರು, ಆಡಳಿತ ಸಮಿತಿ ಅಧ್ಯಕ್ಷ ರವೀಂದ್ರನಾಥ ನಾಯಕ್ ಶೇಣಿ,

ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರಾಮ್ ಕುಮಾರ್ ಯಂ., ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಸಾದ್ ರೈ ಮೊದಲಾದವರು ಉಪಸ್ಥಿತರಿರುವರು.

ಭೂಮಿಪೂಜೆ ಹಾಗೂ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭದ ಆಮಂತ್ರಂಣ ಪತ್ರಿಕೆಯನ್ನು ಬುಧವಾರ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಮಠದಲ್ಲಿ ಬಿಡುಗಡೆಗೊಳಿಸಿದರು. ಪದಾಧಿಕಾರಿಗಳು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries