HEALTH TIPS

ಹಲವು ರಾಜ್ಯಗಳಲ್ಲಿ ಇ.ಡಿ ದಾಳಿ: ₹70 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣ

ನವದೆಹಲಿ: ₹70 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಹಲವು ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರಾಡಳಿತ ಪ್ರದೇಶ ದೆಹಲಿ ಸಹಿತ ಹೈದರಾಬಾದ್, ಜೈಪುರ ಮತ್ತು ಮುಂಬೈಯಲ್ಲಿ ದಾಳಿ ನಡೆಸಲಾಗಿದೆ.

ಯಶ್‌ದೀಪ್ ಶರ್ಮಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ಎಫ್‌ಐಆರ್ ಆಧಾರದಲ್ಲಿ ಇ.ಡಿ, ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ.

'ಪಂಜಾಬ್ ಹಾಗೂ ಸಿಂಧ್ ಬ್ಯಾಂಕ್‌ನಿಂದ ತಮ್ಮ ಒಡೆತನದ ಹಾಗೂ ನಿಯಂತ್ರಣದಲ್ಲಿರುವ ಸಂಸ್ಥೆಗಳ ಮೂಲಕ ₹70 ಕೋಟಿ ಸಾಲ ಪಡೆದಿರುವ ಶರ್ಮಾ ಮತ್ತು ಅವರ ಕುಟುಂಬದ ಸದಸ್ಯರು, ವಂಚನೆ ನಡೆಸಿದ್ದಾರೆ' ಎಂದು ಆಪಾದಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries