ಇಂದೋರ್: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಕೆರೆಗೆ ಉರುಳಿ 9 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ.
ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.
ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು.




