ನವದೆಹಲಿ: ಲೇಹ್ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಅವರನ್ನು ನೇಮಿಸಿ, ಗೃಹ ಸಚಿವಾಲಯ ಶುಕ್ರವಾರ ಆದೇಶಿಸಿದೆ.
ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಸೆಪ್ಟೆಂಬರ್ 24ರಂದು ಲೇಹ್ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ನಡೆದು ನಾಲ್ವರು ಮೃತಪಟ್ಟು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವ ವಿಚಾರವಾಗಿ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಮತ್ತು ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟದ (ಕೆಡಿಎ) ಜತೆಗೆ ಉನ್ನತಾಧಿಕಾರ ಹೊಂದಿರುವ ಸರ್ಕಾರದ ಸಮಿತಿಯು ಚರ್ಚೆಗೆ ಸದಾ ಸಿದ್ಧವಿದೆ ಎಂದು ಗೃಹ ಸಚಿವಾಲಯ ಹೇಳಿದೆ.

