HEALTH TIPS

ಬೇಂಗಪದವಲ್ಲಿ ಸಿಪಿಐಎಂ ಚುನಾವಣಾ ಪೂರ್ವ ಕಾರ್ಯಗಾರ

ಪೆರ್ಲ: ಎಣ್ಮಕಜೆ ಪಂಚಾಯತಿ ಬಜಕೂಡ್ಲು 16ನೇ ವಾರ್ಡ್ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳೇ ಇಲ್ಲಿನ ಮುಂದಿನ ಚುನಾವಣೆಯ ಗೆಲುವಿಗೆ ಮುನ್ನುಡಿಯಾಗಲಿದೆ ಎಂದು ಸಿಪಿಎಂ ಕುಂಬಳೆ ವಲಯ ಕಾರ್ಯದರ್ಶಿ ಸಿ.ಎ.ಸುಬೈರ್ ಅಭಿಪ್ರಾಯಪಟ್ಟರು. ಇಲ್ಲಿನ ವಾರ್ಡ್ ಸದಸ್ಯರ ಹಾಗೂ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಸರ್ಕಾರದ ವಿವಿಧ ಯೋಜನೆಗಳಲ್ಲದೆ ಪಂಚಾಯತಿ ಸವಲತ್ತುಗಳನ್ನು ಅರ್ಹರನ್ನು ಗುರುತಿಸಿ ನೀಡಿರುವುದೇ ಪಕ್ಷದ ಬಲಿಷ್ಠತೆಗೆ ಮುಖ್ಯ ಕಾರಣವಾಗಲಿದೆ ಎಂದು ಅವರು ತಿಳಿಸಿದರು.

ಅವರು ಬೇಂಗಪದವಿನಲ್ಲಿ ನಡೆದ ಸಿಪಿಐಎಂ ಚುನಾವಣಾ ಪೂರ್ವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಸಿಪಿಎಂ ವಲಯ ಸಮಿತಿ ಸದಸ್ಯ ರಘದೇವ ಮಾಸ್ತರ್ ,ಸಿಪಿಎಂ ಪಂಚಾಯತಿ ಸಮಿತಿ ಕಾರ್ಯದರ್ಶಿ ಸುಧಾಕರ ಮಾಸ್ತರ್, ಎಣ್ಮಕಜೆ ಸ್ಥಳೀಯ ಸಮಿತಿ ಕಾರ್ಯದರ್ಶಿ ವಿನೋದ್, ಸದಸ್ಯರಾದ ಸೌದಭಿ ಹನೀಫ್, ವಿಶ್ವರಾಜ್, ಪುಷ್ಪಾ, ಕಾರ್ಯದರ್ಶಿ ಉದಯ, ಹರೀಶ್ ಮೊದಲಾದವರು ಪಾಲ್ಗೊಂಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries