ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಯ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಶ್ರೀ ಜಯರಾಮ ದೇವಸ್ಯ ಬಳಗದಿಂದ ಯಕ್ಷಗಾನ ತಾಳಮದ್ದಳೆ, ಸದಸ್ಯ ಸಮಾವೇಶ ಅ.26 ರಂದು ಮಧ್ಯಾಹ್ನ 1ಗಂಟೆಗೆ ಜರಗಲಿದೆ.
ಸಂಜೆ4ಕ್ಕೆ ನಡೆಯುವ ಸಮಾವೇಶದಲ್ಲಿ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲನೆ ನಡೆಸಿ, ಆಶೀರ್ವಚನ ನೀಡುವರು. ಸಿರಿಬಾಗಿಲು ಪ್ರತಿಷ್ಠಾನ ದ ಅಧ್ಯಕ್ಷ ರಾಮಕೃಷ್ಣಯ್ಯ ಅಧ್ಯಕ್ಷತೆ ವಹಿಸುವರು. ಹಿರಿಯರ ರಂಗಭೂಮಿ ತಜ್ಞ ಮೂರ್ತಿ ದೇರಾಜೆ, ವಿದ್ವಾಂಸ, ಯಕ್ಷಗಾನ ಅರ್ಥದಾರಿ ಪ್ರವಚನಕಾರ ಉಜಿರೆ ಅಶೋಕ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು, ಪುಳ್ಕೂರು ಶ್ರೀ ಮಹಾದೇವ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶೀನ ಶೆಟ್ಟಿ ಕಜೆ ಪ್ರತಿಷ್ಠಾನದ ಪೆÇ್ರೀತ್ಸಾಹಕ ಕಾಸರಗೋಡಿನ ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತಡ್ಕ, ವಾಸುದೇವ ಕಾರಂತ ಉಜಿರೆಕೆರೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ "ಸಾಕೇತ ಕಲಾವಿದರು ಹೆಗ್ಗೋಡು ಸಾಗರ "ಇವರಿಂದ "ಗದಾಯುದ್ಧ" ಎಂಬ ಬಡಗುತ್ತಿನ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ.

