HEALTH TIPS

ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ನಾಳೆ ನವಾನ್ನ ಸಮರ್ಪಣೆ ಹಾಗೂ ಬಲಿವಾಡು ಕೂಟ

ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ನವಾನ್ನ ಸಮರ್ಪಣೆ ಹಾಗೂ ಬಲಿವಾಡು ಕೂಟ ನಾಳೆ(ಅ. 17) ಜರಗಲಿರುವುದು. ಈ ಸಂದರ್ಭ ಶ್ರೀ ಕ್ಷೇತ್ರದಲ್ಲಿ ಶಾಶ್ವತ ಪೂಜಾ ಸೇವಾರ್ಥಿಗಳ ಹೆಸರು ನೋಂದಾವಣೆಗಿರುವ "ಶಾಶ್ವತ ಪೂಜಾ ಅಭಿಯಾನ"ಕ್ಕೆ ಚಾಲನೆ ನೀಡಲಾಗುವುದು. 

ಬೆಳಗ್ಗೆ 11:15 ಕ್ಕೆ ಜರಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ಅಧ್ಯಕ್ಷ ನರಸಿಂಹ ಭಟ್ ಕಾರ್ಮಾರು ವಹಿಸಲಿರುವರು. ಶಾಶ್ವತ ಪೂಜಾ ಯೋಜನೆಯ ಅಭಿಯಾನದ ಉದ್ಘಾಟನೆಯನ್ನು ಕಾಪೆರ್Çರೇಷನ್ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಸುಬ್ರಹ್ಮಣ್ಯ ಭಟ್ ಕಾಟಿಪಳ್ಳ ನೆರವೇರಿಸಲಿರುವರು.

ಈ ಸಂದರ್ಭದಲ್ಲಿ ಬ್ಲಾ.ಪಂ.ಸದಸ್ಯೆ ಅಶ್ವಿನಿ ಮೊಳೆಯಾರು, ಗ್ರಾ.ಪಂ. ಸದಸ್ಯ ಶ್ಯಾಮ್ ಪ್ರಸಾದ್ ಮಾನ್ಯ, ನಿವೃತ್ತ ಅಧ್ಯಾಪಕ ಕೃಷ್ಣ ಭಟ್ ಕಕ್ಕಳ, ಆಡಳಿತ ಮೊಕ್ತೇಸರ ರಾಧಾಕೃಷ್ಣ ರೈ ಕಾರ್ಮಾರು ಮೊದಲಾದವರು ಭಾಗವಹಿಸಲಿರುವರು. ಭಕ್ತಾದಿಗಳು ಭಾಗವಹಿಸಿ, ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಸಮಿತಿ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries