ನವದೆಹಲಿ: 'ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ತಡೆಗಟ್ಟಲು ಕಠಿಣ ನಿಯಮಗಳನ್ನು ರೂಪಿಸಿ ಬಿತ್ತನೆ ಬೀಜ ಕಾಯ್ದೆಗೆ ತಿದ್ದುಪಡಿ ತರಲಾಗುವುದು' ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದರು.
ರೈತ ಉತ್ಪಾದಕ ಸಂಘ (ಎಫ್ಪಿಒ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, 'ಮುಂದಿನ ವರ್ಷದ ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು' ಎಂದರು.
'ಕುಲಾಂತರಿ ಬಿತ್ತನೆ ಬೀಜಗಳ ಪೂರೈಕೆಗೆ ಅವಕಾಶವಿಲ್ಲ. ಜೊತೆಗೆ ಇತರೆ ಉತ್ತಮ ತಳಿಯ ಬಿತ್ತನೆ ಬೀಜಗಳನ್ನು ಅಭಿವೃದ್ಧಿಪಡಿಸಲು ಸಂಶೋಧನೆಗಳು ನಡೆಯುತ್ತಿವೆ' ಎಂದರು.




