ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿದ್ಯಾದಶಮಿಯ ಅಂಗವಾಗಿ ಗುರುವಾರ ಶಾರದಾಪೂಜಾ ಕಾರ್ಯಕ್ರಮ ವೇ.ಮೂ. ಕೋಣಮ್ಮೆ ಮಹಾದೇವ ಭಟ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರಂಭ ಕಾರ್ಯಕ್ರಮ ಮತ್ತು ವಿದ್ಯಾಲಯದ ವಾಹನಗಳಿಗೆ ವಾಹನ ಪೂಜೆಯನ್ನು ನಡೆಸಲಾಯಿತು.
ಬಳಿಕ ವಿದ್ಯಾರ್ಥಿಗಳನ್ನು ಸನಿಹದ ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರೆದೊಯ್ದು ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ರಕ್ಷಕವೃಂದ, ಮತ್ತು ಅಧ್ಯಾಪಕರು ಉಪಸ್ಥಿತರಿದ್ದು ಸಹಕರಿಸಿದರು.






