HEALTH TIPS

ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನ: ಸುನೀಲ್‌ ಅಂಬೇಕರ್‌

ಜಬಲ್ಪುರ: 'ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವ ಆಚರಣೆ ಪ್ರಯುಕ್ತ ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನ ಆಯೋಜಿಸಲಾಗುವುದು' ಎಂದು ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ್‌ ಸುನೀಲ್‌ ಅಂಬೇಕರ್‌ ಮಂಗಳವಾರ ತಿಳಿಸಿದರು.

ಇಲ್ಲಿ ಅ.30ರಿಂದ ಆರಂಭವಾಗಲಿರುವ ಸಂಘದ ಅಖಿಲ ಭಾರತ ಕಾರ್ಯಕಾರಿ ಸಮಿತಿಯ ಮೂರು ದಿನಗಳ ವಾರ್ಷಿಕ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

'ಪಂಚ ಪರಿವರ್ತನೆ, ಹಿಂದುತ್ವದ ವಿಸ್ತರಣೆ, ಕುಟುಂಬ ಪ್ರಬೋಧನ, ಸಾಮಾಜಿಕ ಸಾಮರಸ್ಯವನ್ನು ಪ್ರೋತ್ಸಾಹಿಸುವುದು ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸುವುದು ಈ ಸಮ್ಮೇಳನಗಳ ಮುಖ್ಯ ಉದ್ದೇಶವಾಗಿದೆ' ಎಂದರು.

'ಪಂಚ ಪರಿವರ್ತನೆ ಎಂಬುದು ಆರ್‌ಎಸ್‌ಎಸ್‌ನ ಪ್ರಮುಖ ಕಾರ್ಯಕ್ರಮವಾಗಿದೆ. ಸಾಮಾಜಿಕ ಸಾಮರಸ್ಯ, ಕುಟುಂಬ ಪ್ರಜ್ಞೆ, ನಾಗರಿಕ ಕರ್ತವ್ಯ, ಪರಿಸರ ಜಾಗೃತಿ ಹಾಗೂ ಸ್ವಾವಲಂಬನೆ ಮೂಲಕ ರಾಷ್ಟ್ರೀಯ ಪರಿವರ್ತನೆಯ ಮೇಲೆ ಕೇಂದ್ರೀಕರಿಸಲಾಗುತ್ತದೆ' ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries