HEALTH TIPS

ಕುಳೂರು ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ

ಮಂಜೇಶ್ವರ : ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳಾದ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸೇವನಾ ದಿನಾಚರಣೆಯನ್ನಾಗಿ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.


ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾತೃ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಉಷಾ ಆದರ್ಶನಗರ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಿಯಾಂಕ ಕೇಮಜಲ್, ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಿದ್ಯಾ ಕಾಯರ್ ತೊಟ್ಟಿ, ಶ್ವೇತ ಕೇಮಜಲ್ ಉಪಸ್ಥಿತರಿದ್ದರು.

ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಬಳಿಕ ಶಾಲಾ ಪರಿಸರ ಶುಚೀಕರಣ ನಡೆಯಿತು. ಶಾಲಾ ಶಿಕ್ಷಕ ವೃಂದ, ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಸತೀಶ್ ಎಲಿಯಾಣ, ಸದಸ್ಯರಾದ ಉದಯಕುಮಾರಿ ಕುಳೂರು, ಭಾರತಿ ಕುಳೂರು, ಜಲಜ ಪೆÇಯ್ಯೇಲು ಹಾಗೂ ಮಕ್ಕಳು ಜೊತೆ ಸೇರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ದಸರಾ ಪ್ರಯುಕ್ತ ಹುಲಿವೇಷ ಕುಣಿತ ತಂಡವು ಶಾಲೆಗೆ ಬಂದು ಕುಣಿದು ಮಕ್ಕಳನ್ನು ಮನ ರಂಜಿಸಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries