ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಗಣಿತ ಮೇಳ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ ಪಂಚಾಯತಿ ಸದಸ್ಯ ನಾರಾಯಣ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯ ಅನಿತಾಶ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಜನಾರ್ಧನ ಪೂಜಾರಿ, ಜಯಂತಿ, ಕುಂಬಳೆ ಎಚ್ ಎಂ ಫಾರಂ ಕಾರ್ಯದರ್ಶಿ ಸುರೇಂದ್ರನ್ ಎಂ ವಿ, ಪಿಟಿಎ ಅಧ್ಯಕ್ಷ ಮೊಯಿದು ಸೀತಾಂಗೋಳಿ, ಎಂಪಿಟಿಎ ಅಧ್ಯಕ್ಷೆ ರಾಜಿ ರಾಜೇಶ್, ಪಿಟಿಎ ಉಪಾಧ್ಯಕ್ಷ ರಮೇಶ್ ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುಜಂಗಾವು, ಸುಲೈಮಾನ್ ಊಜಂಪದವು, ಸುನಿಲ್ ಅನಂತಪುರ, ನೌಕರ ಸಂಘದ ಕಾರ್ಯದರ್ಶಿ ಕಿರಣ್ ಕೆ, ಹಿರಿಯ ಶಿಕ್ಷಕಿ ದೇವಿಕರಾಣಿ ಕೆ.ಎಸ್. ಶುಭಾಶಂಸನೆಗೈದರು. ಮುಖ್ಯ ಶಿಕ್ಷಕಿ ಸುನೀತ ಎ ಸ್ವಾಗತಿಸಿ, ಉಪಜಿಲ್ಲಾ ಗಣಿತ ಕ್ಲಬ್ ಕಾರ್ಯದರ್ಶಿ ರಾಧಾಕೃಷ್ಣ ವಂದಿಸಿದರು. ಶರತ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಅಮೃತ, ಶ್ರದ್ಧಾ ಪ್ರಾರ್ಥನೆ ಹಾಡಿದರು. ಕುಂಬಳೆ ಉಪಜಿಲ್ಲಾ ವ್ಯಾಪ್ತಿಯ ಶಾಲೆಗಳಿಂದ ಸುಮಾರು 850 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಪುತ್ತಿಗೆ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಹಸಿರು ಕ್ರಿಯಾಸೇನೆಯ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸಿದರು.


