HEALTH TIPS

ಆಪರೇಷನ್‌ ಸಿಂಧೂರ: ವಾಯುಪಡೆಯ ಸಾಮರ್ಥ್ಯ ಅನಾವರಣ

ಹಿಂಡನ್: 'ಆಕ್ರಮಣಕಾರಿ ವಾಯು ದಾಳಿಯ ಮೂಲಕ ಕೆಲವೇ ದಿನಗಳಲ್ಲಿ ಸೇನಾ ಕಾರ್ಯಾಚರಣೆಯ ಫಲಿತಾಂಶವನ್ನು ಹೇಗೆ ನಿರ್ಧರಿಸಬಹುದು ಎನ್ನುವುದನ್ನು ಭಾರತೀಯ ವಾಯುಪಡೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ವಿಶ್ವದ ಎದುರು ತೆರೆದಿಟ್ಟಿದೆ' ಎಂದು ಭಾರತೀಯ ವಾಯು ಪಡೆ ಮುಖ್ಯಸ್ಥ ಎ.ಪಿ.ಸಿಂಗ್ ಹೇಳಿದ್ದಾರೆ.

ಬುಧವಾರ ಹಿಂಡನ್‌ ವಾಯುನೆಲೆಯಲ್ಲಿ ನಡೆದ 93ನೇ ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ ಅವರು, 'ರಾಷ್ಟ್ರೀಯ ಹಿತಾಸಕ್ತಿ ವಿಚಾರ ಬಂದಾಗ ವಾಯುಪಡೆಯ ಸಾಮರ್ಥ್ಯ ಹೇಗೆ ಅನಾವರಣಗೊಂಡಿತು ಎನ್ನುವುದಕ್ಕೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಜೀವಂತ ಉದಾಹರಣೆ. ಇದು ನಮಗೆ ವೃತ್ತಿಪರ ಹೆಮ್ಮೆ. ವಾಯುಪಡೆಯು ದಿಟ್ಟವಾದ ಮತ್ತು ನಿಖರವಾದ ದಾಳಿಯು ಶತ್ರು ಪಾಳಯದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿತು' ಎಂದರು.

ಸಿಂಧೂರ ಕಾರ್ಯಾಚರಣೆಯಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ರಾಫೆಲ್‌ ಸ್ಕಾಡ್ರನ್‌ ಸೇರಿದಂತೆ ವಿವಿಧ ಐಎಎಫ್‌ ಘಟಕಗಳನ್ನು ಅಭಿನಂದಿಸಿದ ಸಿಂಗ್‌, ಪ್ರಶಂಸನಾ ಪತ್ರಗಳನ್ನು ವಿತರಿಸಿದರು.

'ರಾಷ್ಟ್ರೀಯ ಭದ್ರತೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗಬಹುದಾದ ಎಲ್ಲ ದಾಳಿಗಳನ್ನು ಎದುರಿಸಲು ವಾಯುಪಡೆ ಸರ್ವ ಸನ್ನದ್ಧವಾಗಿರಬೇಕು ಎಂದು ಸಿಂಗ್‌ ಪುನರುಚ್ಛರಿಸಿದರು. 'ನಿಖರವಾದ ಯೋಜನೆ, ಶಿಸ್ತುಬದ್ಧವಾದ ತರಬೇತಿ, ಖಚಿತ ಫಲಿತಾಂಶ'ಕ್ಕೆ ಆಪರೇಷನ್‌ ಸಿಂಧೂರ ಉತ್ತಮ ಉದಾಹರಣೆ' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries