HEALTH TIPS

ಮಂಜೇಶ್ವರ ಚುನಾವಣಾ ಲಂಚ ಪ್ರಕರಣ; ಬಿಜೆಪಿ ನಾಯಕ ಕೆ. ಸುರೇಂದ್ರನ್ ಗೆ ಹೈಕೋರ್ಟ್ ನೋಟಿಸ್.

ಕೊಚ್ಚಿ: ಮಂಜೇಶ್ವರ ಚುನಾವಣಾ ಲಂಚ ಪ್ರಕರಣದಲ್ಲಿ ಬಿಜೆಪಿ ನಾಯಕ ಕೆ. ಸುರೇಂದ್ರನ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ. ಆರೋಪಪಟ್ಟಿ ವಜಾಗೊಳಿಸುವುದರ ವಿರುದ್ಧ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ಸ್ವೀಕರಿಸಿದೆ. ಈ ಅರ್ಜಿಯನ್ನು ಈ ತಿಂಗಳ 30 ರಂದು ಮತ್ತೆ ಪರಿಗಣಿಸಲಾಗುವುದು.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರನ್ನು ಆರೋಪಿಗಳ ಪಟ್ಟಿಯಿಂದ ಹೊರಗಿಟ್ಟ ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹಿಂದಿನ ಪರಿಷ್ಕರಣಾ ಅರ್ಜಿಯನ್ನು ಹಿಂತೆಗೆದುಕೊಂಡ ನಂತರ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಕೆ. ಸುರೇಂದ್ರನ್ ಅವರನ್ನು ಆರೋಪಿಗಳ ಪಟ್ಟಿಯಿಂದ ಹೊರಗಿಟ್ಟ ಸೆಷನ್ಸ್ ನ್ಯಾಯಾಲಯದ ತೀರ್ಪು ದೋಷಪೂರಿತ ಮತ್ತು ಕಾನೂನುಬಾಹಿರ ಎಂದು ಮೇಲ್ಮನವಿಯಲ್ಲಿ ಸರ್ಕಾರದ ವಾದ.

ಪೋಲೀಸರು ಒದಗಿಸಿದ ಸಾಕ್ಷ್ಯಗಳನ್ನು ಪರಿಶೀಲಿಸದೆ ವಿಚಾರಣಾ ನ್ಯಾಯಾಲಯವು ಈ ನಿರ್ಧಾರವನ್ನು ತೆಗೆದುಕೊಂಡಿತು. ಕೆ. ಸುರೇಂದ್ರನ್ ಸೇರಿದಂತೆ ಆರೋಪಿಗಳ ವಿರುದ್ಧ ಎಸ್‍ಸಿ ಮತ್ತು ಎಸ್‍ಟಿ ಕಾಯ್ದೆಯಡಿ ಆರೋಪಗಳು ಉಳಿಯುತ್ತವೆ ಎಂಬುದು ಸರ್ಕಾರದ ವಾದ.2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರಯ್ಯ ಅವರ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಲಂಚ ನೀಡಲಾಗಿದೆ ಎಂದು ಆರೋಪಿಸಿ ಬದಿಯಡುಕ್ಕ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries