HEALTH TIPS

ಭಾರತದ ಹಿತಾಸಕ್ತಿಗೆ ವಿರುದ್ಧ ನಮ್ಮ ನೆಲ ಬಳಕೆ ಮಾಡಲು ಬಿಡುವುದಿಲ್ಲ: ಅಫ್ಗಾನ್

ನವದೆಹಲಿ: ಭಾರತದ ಹಿತಾಸಕ್ತಿಗೆ ವಿರುದ್ಧವಾಗಿ ತಮ್ಮ ನೆಲವನ್ನು ಬಳಕೆ ಮಾಡಲು ಬಿಡುವುದಿಲ್ಲ ಎಂದು ಅಫ್ಗಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಭರವಸೆ ನೀಡಿದ್ದಾರೆ. 

ಭಾರತ ಪ್ರವಾಸದಲ್ಲಿರುವ ಅಮೀರ್, ವಿದೇಶಾಂಗ ಸಚಿವ ಎಸ್.‌ಜೈಶಂಕರ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾಗಿದ್ದಾರೆ.

'ಅಮೆರಿಕದ ಆಕ್ರಮಣದ ಸಂದರ್ಭದಲ್ಲೂ ನಾವು ಎಂದಿಗೂ ಭಾರತದ ವಿರುದ್ಧ ಹೇಳಿಕೆ ನೀಡಿಲ್ಲ. ಭಾರತದೊಂದಿಗಿನ ದ್ವಿಪಕ್ಷೀಯ ಬಾಂಧವ್ಯವನ್ನು ನಾವು ಯಾವತ್ತೂ ಗೌರವಿಸುತ್ತೇವೆ. ಯಾವುದೇ ಸೇನೆಯು ನಮ್ಮ ಭೂಪ್ರದೇಶವನ್ನು ಬೇರೆ ದೇಶಗಳ ವಿರುದ್ಧ ಬಳಕೆ ಮಾಡಲು ಬಿಡುವುದಿಲ್ಲ' ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅಫ್ಗಾನಿಸ್ತಾನದಲ್ಲಿ ಭಾರತದ ರಾಯಭಾರ ಕಚೇರಿ ಪುನರಾರಂಭಿಸುವುದಾಗಿ ಎಸ್.ಜೈಶಂಕರ್ ಭರವಸೆ ನೀಡಿದ್ದಾರೆ.

ಅಲ್ಲದೆ ಅಫ್ಗಾನಿಸ್ತಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ಮೂಲಕ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries