ಸೋಮವಾರ ಹಾಗೂ ಮಂಗಳವಾರದ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಚೆನ್ನೈ ವಲಯ ಕಚೇರಿ ಇಬ್ಬರೂ ನಟರಿಗೆ ಸಮನ್ಸ್ ಜಾರಿ ಮಾಡಿದೆ.
ಚೆನ್ನೈಯಲ್ಲಿ ಇತ್ತೀಚೆಗೆ ಕೊಕೈನ್ ವಶಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿದ ಮಾದಕ ವಸ್ತು ಸಾಗಾಟ ಜಾಲ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ಸಮನ್ಸ್ ಜಾರಿ ಮಾಡಲಾಗಿದೆ.
ಎನ್ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಗ್ರೇಟರ್ ಚೆನ್ನೈನಗರ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಶ್ರೀಕಾಂತ್ (45) ಹಾಗೂ ಕುಮಾರ್ (47)ಗೆ ಮದ್ರಾಸ್ ಉಚ್ಚ ನ್ಯಾಯಾಲಯ 2025ರ ಜುಲೈ 8ರಂದು ಜಾಮೀನು ಮಂಜೂರು ಮಾಡಿತ್ತು.




