HEALTH TIPS

ಹರಿಯಾಣದ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ: ಹಿರಿಯ ಅಧಿಕಾರಿಗಳ ಕಿರುಕುಳ ಎಂದ ಪತ್ನಿ

ಚಂಡೀಗಢ: ಹರಿಯಾಣದ ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹಾಗೂ ಐಎಎಸ್ ಅಧಿಕಾರಿ ಅಮ್ನೀತ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ಪತಿ ಸಾವಿಗೆ ಹಿರಿಯ ಅಧಿಕಾರಿಗಳ ವ್ಯವಸ್ಥಿತ ಕಿರುಕುಳವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಅವರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಅಡಿ ದೂರು ದಾಖಲಿಸಿ ಹರಿಯಾಣದ 13 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮನವಿ ಮಾಡಿದ್ದಾರೆ.

ಪೂರನ್‌ ಕುಮಾರ್‌ ಚಂಡೀಗಢದ ತಮ್ಮ ನಿವಾಸದಲ್ಲಿ ಮಂಗಳವಾರ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಯಹತ್ಮೆ ಮಾಡಿಕೊಂಡಿದ್ದರು.

2001ನೇ ಬ್ಯಾಚಿನ ಐಪಿಎಸ್‌ ಅಧಿಕಾರಿಯಾಗಿದ್ದ ಅವರು, ರೋಹಟಕ್‌ನ ಸುನರಿಯಾದ ಪೊಲೀಸ್ ತರಬೇತಿ ಕೇಂದ್ರದ 'ಐಜಿಪಿ' ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಲ್ಲಿಗೆ ವರ್ಗಾವಣೆ ಆಗಿ ಬರುವ ಮುನ್ನ ಅವರು ರೋಹಟಕ್‌ ವಲಯದ ಐಜಿಪಿ ಆಗಿದ್ದರು.

ಪೂರನ್‌ ಪತ್ನಿ ಅಮ್ನೀತ್‌ ಪಿ. ಕುಮಾರ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

'ಮಂಗಳವಾರ ಮಧ್ಯಾಹ್ನ ಪೊಲೀಸರು ಸೆಕ್ಟರ್‌ 11ರಲ್ಲಿರುವ ಪೂರನ್‌ ಅವರ ನಿವಾಸಕ್ಕೆ ಧಾವಿಸಿದರು. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ' ಎಂದು ಚಂಡೀಗಢದ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್‌ದೀಪ್‌ ಕೌರ್‌ ಸುದ್ದಿಗಾರರಿಗೆ ತಿಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries