HEALTH TIPS

ಲೇಹ್‌: ಇಂಟರ್‌ನೆಟ್‌ ಬಳಕೆಯ ಮೇಲೆ ಹೇರಲಾಗಿದ್ದ ನಿರ್ಬಂಧ ತೆರವು

ಲೇಹ್‌ : ಮೊಬೈಲ್ ಇಂಟರ್‌ನೆಟ್‌ ಬಳಕೆಯ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಲೇಹ್‌ ಜಿಲ್ಲಾಡಳಿತ ಶುಕ್ರವಾರ ತೆರವುಗೊಳಿಸಿದೆ.

ಜನರು ವಾಟ್ಸ್‌ಆಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಬಹುದು. ಆದರೆ, ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಹೇರಿರುವ ನಿರ್ಬಂಧವು ಮುಂದಿನ ಎರಡು ತಿಂಗಳು ಜಾರಿಯಲ್ಲಿ ಇರಲಿದೆ. ವಾಟ್ಸ್‌ಆಯಪ್‌ ಗುಂಪುಗಳ ಅಡ್ಮಿನ್‌ಗಳು ಸುಳ್ಳು ಸುದ್ದಿ ತಮ್ಮ ಗುಂಪುಗಳ ಮೂಲಕ ಹರಡದಂತೆ ತಡೆಯಬೇಕು. ಇಂತಹ ಸಂದೇಶ ಕಂಡುಬಂದರೆ ತಕ್ಷಣ ಅಳಿಸಿ ಹಾಕಬೇಕು. ಇದಕ್ಕಾಗಿ ಗುಂಪುಗಳಲ್ಲಿ 'ಅಡ್ಮಿನ್‌ ಓನ್ಲಿ' ಆಯ್ಕೆಯನ್ನು ಸಕ್ರಿಯಗೊಳಿಸಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೊಮಿಲ್‌ ಸಿಂಗ್ ಡಂಕ್‌ ಆದೇಶದಲ್ಲಿ ತಿಳಿಸಿದ್ದಾರೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕಳೆದ ತಿಂಗಳು ಲೇಹ್‌ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡು, ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಸೆ.24ರಿಂದ ಮೊಬೈಲ್‌ ಇಂಟರ್‌ನೆಟ್‌ ಬಳಕೆಯ ಮೇಲೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries