HEALTH TIPS

ಅಫ್ಗಾನಿಸ್ತಾನ ವಿದೇಶಾಂಗ ಸಚಿವರ ತಾಜ್ ಮಹಲ್ ಭೇಟಿ ದಿಢೀರ್ ರದ್ದು-ಯಾಕೆ?

ನವದೆಹಲಿ: ಭಾರತಕ್ಕೆ ಭೇಟಿ ನೀಡಿರುವ ಅಫ್ಗಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್‌ ಮುತ್ತಾಕಿ ಅವರ ತಾಜ್ ಮಹಲ್ ಭೇಟಿ ಭಾನುವಾರ ದಿಢೀರ್ ರದ್ದಾಗಿದೆ. 

ಅಫ್ಗಾನಿಸ್ತಾನ ವಿದೇಶಾಂಗ ಸಚಿವರ ಆಗ್ರಾ ಭೇಟಿ ರದ್ದಾಗಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಆಗ್ರಾದ ಐತಿಹಾಸಿಕ ತಾಜ್ ಮಹಲ್‌ಗೆ ಅಮೀರ್ ಖಾನ್‌ ಮುತ್ತಾಕಿ ಅವರ ಭೇಟಿ ಭಾನುವಾರ (ಅ.12) ನಿಗದಿಯಾಗಿತ್ತು.

ಮುತ್ತಾಕಿ ಅವರು ಶನಿವಾರದಂದು ಉತ್ತರ ಪ್ರದೇಶದ ಸಹಾರನಪುರ ಜಿಲ್ಲೆಯ ದೇವಬಂದ್‌ನಲ್ಲಿರುವ ಇಸ್ಲಾಂ ಶಿಕ್ಷಣದ ಪ್ರತಿಷ್ಠಿತ ಸಂಸ್ಥೆ ದಾರುಲ್‌ ಉಲೂಮ್‌ಗೆ ಭೇಟಿ ನೀಡಿದ್ದರು.

ಆದರೆ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಪತ್ರಕರ್ತೆಯರಿಗೆ ಅವಕಾಶ ನೀಡದಿರುವ ವಿಚಾರ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.

ಆರು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಮುತ್ತಾಕಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಕಾಬೂಲ್‌ನಲ್ಲಿ ರಾಯಭಾರಿ ಕಚೇರಿ ಪುನರಾರಂಭ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವುದಾಗಿ ಜೈಶಂಕರ್ ಭರವಸೆ ನೀಡಿದ್ದರು.

ಅಫ್ಗಾನಿಸ್ತಾನದಲ್ಲಿ ನಾಲ್ಕು ವರ್ಷದ ಹಿಂದೆ ಅಧಿಕಾರ ಪಡೆದ ಬಳಿಕ ತಾಲಿಬಾನ್‌ನ ಉನ್ನತ ನಾಯಕರೊಬ್ಬರು ಇದೇ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries