HEALTH TIPS

ಕೇರಳದಲ್ಲಿ ಭಾರಿ ಮಳೆ | ಇಬ್ಬರ ಸಾವು, ಆರೆಂಜ್‌ ಅಲರ್ಟ್‌ ಘೋಷಣೆ

 ತಿರುವನಂತಪುರ: ಕೇರಳದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ದೋಣಿ ಮಗುಚಿ ಮೀನುಗಾರರೊಬ್ಬರು ಮೃತಪಟ್ಟಿದ್ದು, ಸಿಡಿಲು ಬಡಿದು ಪಶ್ಚಿಮ ಬಂಗಳಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.


ಆರ್ತುಂಗಳ್‌ ಕರಾವಳಿ ಪ್ರದೇಶದ ಪೌಲ್‌ ದೇವಸ್ಯ ಎಂಬುವರು ಸೋಮವಾರ ಬೆಳಿಗ್ಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದರು.

ಈ ವೇಳೆ ವೇಗವಾಗಿ ಗಾಳಿ ಬೀಸಿದ್ದರಿಂದ ಇವರಿದ್ದ ದೋಣಿಯು ಮುಗುಚಿದೆ. ಇತರೆ ಮೀನುಗಾರರು ಇವರನ್ನು ರಕ್ಷಿಸಿದರಾದರೂ ಬಳಿಕ ಮೃತಪಟ್ಟರು. ಅಂಗಮಾಲಿ ಬಳಿಯ ಪಶ್ಚಿಮ ಬಂಗಾಳದ ಕೊಕ್ಕನ್‌ ಮಿಸ್ತ್ರಿ ಎಂಬುವರು ತಮ್ಮ ಮನೆಯಲ್ಲಿ ಇರುವಾಗ ಬೆಳಿಗ್ಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಕೊಯಿಕ್ಕೋಡ್‌, ಕಣ್ಣೂರು, ಕಾಸರಗೋಡು, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 11.5 ಸೆಂ.ಮೀನಿಂದ 20.4 ಸೆಂ.ಮೀನಷ್ಟು ಮಳೆ ಸುರಿಯಲಿದೆ ಎಂದು ಇಲಾಖೆ ಅಂದಾಜಿಸಿದೆ.

ವಯನಾಡ್‌, ಮಲ್ಲಪ್ಪುರಂ, ಪಾಲಕ್ಕಾಡ್‌, ತ್ರಿಶ್ಶೂರ್‌, ಎರ್ನಾಕುಲಂ, ಇಡುಕ್ಕಿ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 6.4 ಸೆಂ.ಮೀನಿಂದ 11.5 ಸೆಂ.ಮೀನಷ್ಟು ಮಳೆಯಾಗಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೇಗವಾಗಿ ಗಾಳಿ ಬೀಸಲಿದ್ದು, ಮಂಗಳವಾರವೂ ಭಾರಿ ಮಳೆಯಾಗಬಹುದು ಎಂದೂ ಹೇಳಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries