HEALTH TIPS

ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಕಾಂಗ್ರೆಸ್‌ಗೆ

ನವದೆಹಲಿ: ಮಾಜಿ ಐಎಎಸ್‌ ಅಧಿಕಾರಿ ಕೇರಳದ ಕಣ್ಣನ್‌ ಗೋಪಿನಾಥನ್‌ ಅವರು ಸೋಮವಾರ ಕಾಂಗ್ರೆಸ್‌ ಸೇರಿದರು. 'ಕಾಂಗ್ರೆಸ್‌ ಪಕ್ಷ ಮಾತ್ರ ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಬಲ್ಲದು' ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ್ದರಿಂದ ಅಲ್ಲಿನ ಜನರಿಗೆ 'ಅಭಿವ್ಯಕ್ತಿ ಸ್ವಾತಂತ್ರ್ಯ ನಿರಾಕರಿಸಲಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿ ಕಣ್ಣನ್ ಅವರು 2019ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ಹಾಗೂ ಪಕ್ಷದ ಮುಖಂಡರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್‌ ಮೇವಾನಿ ಮತ್ತು ಮಾಜಿ ಐಎಎಸ್‌ ಅಧಿಕಾರಿಯೂ ಆಗಿರುವ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

'ಗೋಪಿನಾಥನ್‌ ಅವರು ದೇಶದ ದೀನದಲಿತರ ಮತ್ತು ತಳ ಸಮುದಾಯದ ಜನರ ಬಗ್ಗೆ ಕಾಳಜಿ ಹೊಂದಿರುವ, ಯಾವಾಗಲೂ ನ್ಯಾಯ ಹಾಗೂ ಒಗ್ಗಟ್ಟಿಗಾಗಿ ಹೋರಾಡಿದ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ಕೇರಳದಲ್ಲಿ ಜನಿಸಿದ ಅವರು ಈಶಾನ್ಯ ರಾಜ್ಯಗಳು ಮತ್ತು ದೇಶದ ಇತರ ಭಾಗಗಳಲ್ಲಿ ಕೆಲಸ ಮಾಡಿದ್ದಾರೆ' ಎಂದು ವೇಣುಗೋಪಾಲ್ ಹೇಳಿದರು.

'ಅವರು ಐಎಎಸ್‌ ಹುದ್ದೆಗೆ 2019ರಲ್ಲಿ ರಾಜೀನಾಮೆ ನೀಡಿದರು. ಆದರೆ, ರಾಜೀನಾಮೆಯನ್ನು ಇನ್ನೂ ಅಂಗೀಕರಿಸಲಾಗಿಲ್ಲ. ನ್ಯಾಯಕ್ಕಾಗಿ ಹೋರಾಡುವ ಅಧಿಕಾರಿಗಳನ್ನು ಸರ್ಕಾರವು ಶಿಕ್ಷಿಸುತ್ತಿದೆ' ಎಂದು ಟೀಕಿಸಿದರು.

- ಕಣ್ಣನ್‌ ಗೋಪಿನಾಥನ್‌, ಮಾಜಿ ಐಎಎಸ್‌ ಅಧಿಕಾರಿಬಿಜೆಪಿ ಸರ್ಕಾರ ದೇಶವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುತ್ತಿಲ್ಲ ಎಂಬುದು ಮನವರಿಕೆಯಾದಾಗ ಐಎಎಸ್‌ ಹುದ್ದೆ ತ್ಯಜಿಸಿದೆ. ಸರ್ಕಾರ ಮಾಡುತ್ತಿರುವ ತಪ್ಪಿನ ವಿರುದ್ಧ ನಾನು ಹೋರಾಡಬೇಕು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries