ಬದಿಯಡ್ಕ : ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಬೆಂಗಳೂರಿನ ಭಟ್ ಬಯೋ ಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಡಾ. ಶಾಮ ಭಟ್ ಇವರ ವತಿಯಿಂದ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ಕಳೆದ ಮೂರು ವರ್ಷಗಳಿಂದ ಡಾ. ಶಾಮ ಭಟ್ ಇವರು ತಮ್ಮ ಸ್ನೇಹಿತ, ಆಶುಕವಿ ವಾಗ್ಮಿ ದಿ. ಪೆÇಟ್ಟಿಪ್ಪಲ ನಾರಾಯಣ ಭಟ್ಟರ ಸ್ಮರಣಾರ್ಥ ಶಾಲೆಯಿಂದ ಗುರುತಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸುತ್ತಿದ್ದಾರೆ. ಈ ವರ್ಷದ ಶಿಷ್ಯವೇತನವನ್ನು ಅಕ್ಷಯಾ ವೆಂಕಟೇಶ್ (10ನೇ ತರಗತಿ) ಮತ್ತು ಜಯಂತ ಕೃಷ್ಣ ಭಟ್ ಕೆ (8ನೇ ತರಗತಿ) ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶಾಮ ಭಟ್ ಅವರು, ತಾನು ಬೆಳೆದು ಬಂದ ದಾರಿ, ಸ್ನೇಹಿತನೊಂದಿಗಿನ ಒಡನಾಟದ ನೆನಪುಗಳನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆರೆಮೂಲೆ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಪೆÇಟ್ಟಿಪ್ಪಲ ನಾರಾಯಣ ಭಟ್ ಅವರ ಪುತ್ರ ಡಾ. ಗಿರೀಶ್, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕøತಿಕ ಸಂಸ್ಥೆಯ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮಧುಸೂದನ ತಿಮ್ಮಕಜೆ, ಸದಸ್ಯ ಡಾ. ಬೇ. ಸೀ. ಗೋಪಾಲಕೃಷ್ಣ ಭಟ್, ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಉಪಸ್ಥಿತರಿದ್ದರು. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳಿಬ್ಬರೂ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶಿಕ್ಷಕಿ ಸರೋಜಾ ಕಾನತ್ತಿಲ ಕಾರ್ಯಕ್ರಮ ನಿರೂಪಿಸಿದರು.


