HEALTH TIPS

ವನ್ಯಜೀವಿ ಸಂರಕ್ಷಣಾ ಕಾಯ್ದೆ ತಿದ್ದುಪಡಿ ಮಸೂದೆ; ಕೇರಳವೇ ಮೊದಲ ರಾಜ್ಯ: CM ವಿಜಯನ್

ತಿರುವನಂತಪುರಂ: ಕೇಂದ್ರದ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ಕ್ಕೆ ತಿದ್ದುಪಡಿ ಮಸೂದೆ ಅಂಗೀಕರಿಸಿದ ಮೊದಲ ರಾಜ್ಯ ಕೇರಳ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಾನವ - ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಬುಧವಾರ ಅಂಗೀಕರಿಸಲಾಗಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್‌'ನಲ್ಲಿ ಗುರುವಾರ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, 'ಕೇರಳ ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದು, ಮಾನವ - ವನ್ಯಜೀವಿ ಸಂಘರ್ಷ ಪರಿಹರಿಸುವ ನಿಟ್ಟಿನಲ್ಲಿ ಹಾಗೂ ಅರಣ್ಯದಂಚಿನ ಸಮುದಾಯಗಳಿಗೆ ನ್ಯಾಯವನ್ನು ಖಾತ್ರಿ ಮಾಡುವ ದಿಕ್ಕಿನಲ್ಲಿ ಇರಿಸಿದ ಮಹತ್ವದ ಹೆಜ್ಜೆಯಾಗಿದೆ' ಎಂದು ಬರೆದುಕೊಂಡಿದ್ದಾರೆ.

'ಮಾನವ, ವನ್ಯಜೀವಿಗಳ ಸುರಕ್ಷತೆಗೆ, ಜನರು ಮತ್ತು ಪ್ರಕೃತಿ ನಡುವಣ ಸಾಮರಸ್ಯ ಕಾಪಾಡಲು ಕೇರಳ ಹೊಂದಿರುವ ಬದ್ಧತೆಯನ್ನು ಈ ಸುಧಾರಣಾ ಕ್ರಮವು ಪುನಃ ಸಾರಿ ಹೇಳುತ್ತದೆ' ಎಂದು ಪ್ರತಿಪಾದಿಸಿದ್ದಾರೆ.

ಈ ಮಸೂದೆಯನ್ನು ರಾಜಭವನಕ್ಕೆ ಕಳುಹಿಸಲಾಗುವುದು. ಇದು, ಕೇಂದ್ರಕ್ಕೆ ಸಂಬಂಧಿಸಿದ್ದಾಗಿರುವುದರಿಂದ ರಾಷ್ಟ್ರಪತಿಯವರಿಗೂ ಕಳಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries